
ಈ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಯಾವುದೇ ವ್ಯಕ್ತಿ ಆಗಲಿ. ಯಾರೇ ಇರಲಿ ಅದು ಪ್ರಧಾನಿಯೇ ಇರಲಿ ಯಾವುದೇ ಮುಖಂಡರಿಗೆ ಅಗೌರವವನ್ನು ತೋರಬಾರದು. ಅವರ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಬಾರದು. ಬಿಜೆಪಿಯವರಾಗಲಿ ನಮ್ಮವರೇ ಆಗಲಿ ಈ ರೀತಿ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ ಕರೆಯಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಮೋದಿ ಅಧಿವೇಶನದಲ್ಲಿ ಇರಬೇಕು ಏನೆಲ್ಲಾ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಬೇಕು ನಾವು ಪ್ರಧಾನಿಗೆ ಸಂಪೂರ್ಣ ಬೆಂಬಲ ಕೊಡುತ್ತೇವೆ. ದೇಶದ ರಕ್ಷಣೆಗೆ ಒಳ್ಳೆಯ ಹೆಜ್ಜೆ ಇಡಬೇಕು ಎಂದರು.





