ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್!

 

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಹಾಗೂ ಪೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ನಿರಾಕರಿಸುವ ಮೂಲಕ ಶಾಕ್ ನೀಡಿದೆ. ಹಾಗಾದ್ರೆ, ಮುತ್ಯಾ ಜೈಲುಪಾಲಾಗುತ್ತಾರಾ?.

ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ್ದ ಯಾದಗಿರಿ ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ವಿಚಾರಣೆಗೆ ಹಾಜರಾಗುವ ಮೊದಲೇ ಅಜ್ಞಾತ ಸ್ಥಳದಿಂದಲೇ ಮಲ್ಲಿಕಾರ್ಜುನ ಮುತ್ಯಾ, ತಮ್ಮ ವಿರುದ್ಧದ ಫೋಕ್ಸೋ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಅದೇನಾಯ್ತೋ ಏನೋ ಏಕಾಏಕಿ ಕೋರ್ಟ್​​ನಿಂದ ಅರ್ಜಿ ವಾಪಸ್ ಪಡೆದುಕೊಂಡು ಬಳಿಕ ನಿರೀಕ್ಷಣಾ ಜಾಮೀನು ಕೋರಿ ಯಾದಗಿರಿ ಜಿಲ್ಲಾ ಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇದಕ್ಕೆ ಸರ್ಕಾರಿ ವಕೀಲರು ಇದಕ್ಕೆ ಆಕ್ಷೇಪ ಸಲ್ಲಿಸಿದ್ದರು. ಇದರಿಂದ ಶುಕ್ರವಾರ ಕೋರ್ಟ್​, ಎರಡು ಕಡೆ ವಾದ ಪ್ರತಿವಾದ ಆಲಿಸಿದ್ದು, ​ಜಾಮೀನು ಆದೇಶವನ್ನು ಇಂದಿಗೆಕಾಯ್ದಿರಿಸಿತ್ತು. ಇದೀಗ ಕೋರ್ಟ್ ಮುತ್ಯಾನಿಗೆ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ಸಂಕಷ್ಟ ಎದುರಾಗಿದ್ದು, ಇದೀಗ ಜಾಮೀನಿಗಾಗಿ ಹೈಕೋರ್ಟ್​​ ಮೆಟ್ಟಿಲೇರಬೇಕಿದೆ.

ಫೋಕ್ಸೋ ಕೇಸ್: ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಮೂರ್ನಾಲ್ಕು ದಿನದ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು.ಈ ಪ್ರಕರಣದ ತನಿಖಾಧಿಕಾರಿಯಾಗಿರುವ ಶಹಪೂರ ಸಿಪಿಐ ಶರಣಗೌಡ ನಾಮಣ್ಣವರ ಅವರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಮಲ್ಲಿಕಾರ್ಜುನ ಮುತ್ಯಾನನ್ನು ಮೊದಲ ಹಂತದ ವಿಚಾರಣೆ ಅವರ ನಾಲ್ಕು ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ. ಈ ಮೊಬೈಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮೊಬೈಲ್‌ನಲ್ಲಿರುವ ಸಂದೇಶಗಳು, ಕರೆ ದಾಖಲೆಗಳು ಅಥವಾ ವಿಡಿಯೋಗಳ ಬಗ್ಗೆ ತನಿಖಾ ತಂಡವು ತಾಂತ್ರಿಕ ಪರಿಶೀಲನೆ ನಡೆಸುತ್ತಿದೆ.

ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ರಾಜ್ಯಾದ್ಯಂತ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲಿಯೇ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಯಾದಗಿರಿ ಜಿಲ್ಲಾಧಿಕಾರಿ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಇದರ ಬೆನ್ನಲ್ಲೇ ಡಿಸಿ ಸೂಚನೆ ಮೇರೆಗೆ ಫೆಬ್ರವರಿ 25ರಂದು ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಮುತ್ಯಾ ನಾಪತ್ತೆಯಾಗಿದ್ದ. ಇನ್ನೊಂದೆಡೆ ಅವರ ಭಕ್ತರು ಹಾಗೂ ಕೋಲಿ ಸಮಾಜ ಪ್ರತಿಭಟನೆ ನಡೆಸಿದ್ದು, ಮುತ್ಯಾ ವಿರುದ್ಧದ ಫೋಕ್ಸೋ ಪ್ರಕರಣ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!