ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ

ಮೈಸೂರು: ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿತು.
ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮಕ್ಕಳು ಕುಣಿದು ಕುಪ್ಪಳಿಸಿದರು.

ಸಾರಂಗ ಕೇಂದ್ರ ವೈಮಾನಿಕ ಪ್ರದರ್ಶನದ 5 ಹೆಲಿಕ್ಯಾಪ್ಟರ್ ಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದು, ಮಿಂಚಿನ ರೀತಿ ಶರವೇಗದಲ್ಲಿ ಹಾರುವ ಪ್ರದರ್ಶನದ ಚಿತ್ತಾರವನ್ನು ನೆರೆದಿಂದಂತಹ ಸಾರ್ವಜನಿಕರು ಕಣ್ತುಂಬಿಕೊಂಡರು. ನೀಲಿ ಗಗನದಲ್ಲಿ ಓಲಾಡಿ- ತೇಲಾಡಿದ ಲೋಹದ ಹಕ್ಕಿಗಳು ಬಣ್ಣ ಬಣ್ಣದ ಹೊಗೆಯ ಮೂಲಕ ಹೃದಯ ಬಿಳಿ ಗೆರೆಗಳನ್ನು ಬರೆಯುವುದರ ಮೂಲಕ ರೋಮಾಂಚನಕಾರಿ ದೃಶ್ಯಕ್ಕೆ ಪಾತ್ರವಾದವು.

ಆಗಸದಲ್ಲಿ ಮೈನವಿರೇಳುವ ಮೈಮಾನಿಕ ಪ್ರದರ್ಶನವನ್ನು ಕಂಡು ಪ್ರೇಕ್ಷಕರು ಪುಳಕಿತಗೊಂಡರು. ಅನೇಕ ರೋಮಾಂಚನಕಾರಿ ಅನುಭವಕ್ಕೆ ಇಂದು ನಡೆದ ವೈಮಾನಿಕ ಪ್ರದರ್ಶನ ಸಾಕ್ಷಿಯಾದವು. ಬಾನಂಗಳಕ್ಕೆ ಹೇರಿ ನೆಲಕ್ಕೆ ರಪ್ಪನೆ ಬೀಳುವ ರೀತಿಯಲ್ಲಿ ಪ್ರದರ್ಶನ ನೀಡಿ ನೋಡುಗರನ್ನು ಅಚ್ಚರಿ ಗೊಳಿಸಿದವು.
ಪೂರ್ವಬ್ಯಾಸ ಪ್ರದರ್ಶನಕ್ಕೆ ಇಡೀ ಕವಾಯತು ಮೈದಾನ ಭರ್ತಿ ಆಗಿದ್ದು, ಸೆಪ್ಟೆಂಬರ್ 27 ರಂದು ಸಂಜೆ 5 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೈಮಾನಿಕ ಪ್ರದರ್ಶನ ಕಣ್ತುಂಬಿಕೊಳ್ಳಲು ಮೈಸೂರಿಗರು ಕಾಯುತ್ತಿದ್ದಾರೆ, ಒಟ್ಟಾರೆ ಈ ಬಾರಿಯ ವೈಮಾನಿಕ ಪ್ರದರ್ಶನ ದಸರಾ ಮಹೋತ್ಸವಕ್ಕೆ ಇನ್ನಷ್ಟು ಮೆರುಗನ್ನು ತರಲಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!