
ತಮ್ಮ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ಅವರು ಇಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕಾರ ಮಾಡಿರುವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಶಾಸಕ ಯತ್ನಾಳ್ ಸವಾಲು ಸ್ವೀಕರಿಸಿ ರಾಜೀನಾಮೆ ನೀಡಿದ್ದೇನೆ. ಅವರು ಬಸವನಬಾಗೇವಾಡಿ ಕ್ಷೇತ್ರದಲ್ಲಾದರೂ ನಿಲ್ಲಲಿ ಇಲ್ಲವಾದರೇ ಅವರು ರಾಜೀನಾಮೆ ನೀಡಲಿ ಅವರ ಕ್ಷೇತ್ರದಲ್ಲೇ ನಾನು ಸ್ಪರ್ಧಿಸಲು ಸಿದ್ದನಿದ್ದೇನೆ ಎಂದರು.





