ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ!

ವಾಷಿಂಗ್ಟನ್‌: ಅಮೆರಿಕದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ ಮಾಧ್ಯಮ ವರದಿ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಇರಾನ್‌ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಸೋಮವಾರ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್‌ ಇರಾನ್ ದೇಶದ ಜೊತೆ ಕಳೆದ ಎರಡು ದಿನಗಳಲ್ಲಿ ಉತ್ತಮ ಮಾತುಕತೆ ನಡೆದಿದೆ. ಫಲಪ್ರದವಾದ ಮಾತುಕತೆ ನಡೆದ ಹಿನ್ನೆಲೆಯಲ್ಲಿ ಇರಾನಿನ ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ಎಲ್ಲಾ ಮಿಲಿಟರಿ ದಾಳಿಗಳನ್ನು ಐದು ದಿನಗಳ ಅವಧಿಗೆ ಮುಂದೂಡಲು ಸೂಚನೆ ನೀಡಿದ್ದೇನೆ ಎಂದು ಪೋಸ್ಟ್‌ ಮಾಡಿದ್ದರು.

ಈ ಪೋಸ್ಟ್‌ಗೆ ಮೊದಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನಿಮ್ಮ ವಿದ್ಯುತ್‌ ಸ್ಥಾವರ ನಾಶ ಮಾಡುವುದಾಗಿ ಇರಾನಿಗೆ ಬೆದರಿಕೆ ಹಾಕಿದ್ದರು. ಈ ಡೆಡ್‌ಲೈನ್‌ ಒಳಗಡೆ ಇರಾನ್‌ ತೆರೆಯದೇ ಇದ್ದರೆ ದೊಡ್ಡ ಪ್ರಮಾಣದ ಯುದ್ಧ ನಡೆಯುವ ಸಾಧ್ಯತೆ ಇತ್ತು.

ಅಮೆರಿಕದ ಬೆದರಿಕೆಗೆ ಜಗ್ಗದ ಇರಾನ್‌, ಒಂದು ವೇಳೆ ನಮ್ಮ ಇಂಧನ, ವಿದ್ಯುತ್‌ ಮೂಲಸೌಕರ್ಯಗಳನ್ನು ನಾಶ ಮಾಡಿದರೆ ಮಧ್ಯಪ್ರಾಚ್ಯದಲ್ಲಿರುವ ಇತರ ದೇಶಗಳ ಇಂಧನ, ವಿದ್ಯುತ್‌ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತೇವೆ ಎಂದು ತಿರುಗೇಟು ನೀಡಿತ್ತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!