ಮುಂಗಾರು ಮತ್ತೆ ಚುರುಕು: ದಕ್ಷಿಣ ಕನ್ನಡದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ

ಬೆಳ್ತಂಗಡಿ: ಒಂದು ಹಂತದ ಅಬ್ಬರದ ಮಳೆ ಬಳಿಕ ಸ್ವಲ್ಪ ದಿನಗಳ ಬ್ರೇಕ್ ನಂತರ ಮತ್ತೆ ವರ್ಷಧಾರೆ ಶುರುವಾಗಿದ್ದು, ಎಲ್ಲೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ.

ಮೇ ತಿಂಗಳಲ್ಲಿ ಈ ಬಾರಿ ಉತ್ತಮ ಮಳೆ ಸುರಿದುದರಿಂದ ಕೃಷಿ ನೀರಿನ ಸಮಸ್ಯೆ ದೂರವಾಗಿತ್ತು. ಅಲ್ಲದೆ ಕೃಷಿಕರು ತಮ್ಮ ತೋಟ, ಗದ್ದೆಗಳ ಕೆಲಸವನ್ನು ಬೇಗನೆ ಆರಂಭಿಸಿದ್ದರು. ಆದರೆ ಜೂನ್ ಆರಂಭವಾಗುತ್ತಿದ್ದಂತೆ ಸುಮಾರು 10-12 ದಿನಗಳ ಕಾಲ ಮಳೆ ದೂರವಾಯಿತು. ಈ ಸಮಯ ಕೃಷಿ ಕೆಲಸಗಳು ಕೊಂಚ ಕುಂಠಿತಗೊಂಡವು. ಇದೀಗ 4 ದಿನಗಳಿಂದ ಮಳೆ ಪ್ರಾರಂಭವಾಗಿದ್ದು ಗದ್ದೆಗಳಲ್ಲಿ ನೀರು ತುಂಬಿದೆ. ಇದು ಏಣೇಲು ಭತ್ತದ ಗದ್ದೆಗಳಿಗೆ ಉತ್ತಮವಾಗಿದ್ದು, ಗದ್ದೆಗಳ ಕೆಲಸಗಳು ಭರದಿಂದ ಸಾಗುತ್ತಿದ್ದು ನೇಜಿ ನಾಟಿಯ ತಯಾರಿ ನಡೆದಿದೆ.

ಇತ್ತೀಚಿನ ವರ್ಷಗಳಲ್ಲಿ ಕಾರ್ಮಿಕರ ಕೊರತೆ ಇರುವುದರಿಂದ ಹೆಚ್ಚಿನ ಕೃಷಿಕರು ಅಗತ್ಯ ಕೆಲಸಗಳಿಗೆ ಯಂತ್ರೋಪಕರಣಗಳನ್ನು ಬಳಸುತ್ತಿದ್ದಾರೆ. ಇದು ಕಡಿಮೆ ಖರ್ಚು ಹಾಗೂ ಕೆಲಸಗಳು ವೇಗವಾಗಿ ಸಾಗಲು ಸಹಕಾರಿಯಾಗಿದೆ. ಗದ್ದೆಗಳನ್ನು ಹದ ಮಾಡಲು ಟಿಲ್ಲರ್, ಟ್ರ್ಯಾಕ್ಟರ್ಗಳಿಗೆ ಬೇಡಿಕೆ ಹೆಚ್ಚಿದೆ. ಇದರ ಜತೆ ನೇಜಿ, ಬಿತ್ತನೆ ಬೀಜದ ಬೇಡಿಕೆ ಅಧಿಕಗೊಂಡಿದೆ. ಗದ್ದೆಗಳ ಬದು ಕಟ್ಟುವುದು, ಸಣ್ಣ ಪ್ರಮಾಣದ ಕಣಿಗಳನ್ನು ನಿರ್ಮಿಸುವುದು, ನೀರು ನಿಲ್ಲಿಸುವ, ಅಧಿಕ ನೀರನ್ನು ಹೊರ ಬಿಡುವ ಕೆಲಸಗಳನ್ನು ಕಾರ್ಮಿಕರಿಂದ ಮಾಡಿಸಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನಲ್ಲಿ 1600 ಹೆಕ್ಟೇರ್ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಕಳೆದ 1580 ಹೆಕ್ಟೇರ್ನಲ್ಲಿ ಬಿತ್ತನೆ ಮಾಡಲಾಗಿತ್ತು. ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ, ಕೊಕ್ಕಡ ವೇಣೂರು ಹೋಬಳಿಗಳಲ್ಲಿ ಎಂಒ-(4)- 40ಕ್ವಿಂ., ಬಿಳಿಜಯ-16ಕ್ವಿಂ., ಜ್ಯೋತಿ-12ಕ್ವಿಂ. ಬಿತ್ತನೆ ಬೀಜ ಸಹಾಯಧನದಲ್ಲಿ ಲಭ್ಯವಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಸಿಂಪಡಣೆಗೆ ಅನುಕೂಲ
ಜೂನ್ ತಿಂಗಳಲ್ಲಿ 10 ದಿನ ಮಳೆ ಬಿಟ್ಟು ಬಿಸಿಲಿನ ವಾತಾವರಣ ಮೂಡಿದ್ದು, ಅಡಕೆ ತೋಟಗಳಿಗೆ ಔಷಧ ಸಿಂಪಡಿಸುವ ಕೃಷಿಕರಿಗೆ ಹೆಚ್ಚಿನ ಅನುಕೂಲ ನೀಡಿತ್ತು. ಮೇ ತಿಂಗಳ ಕೊನೆಯ ವಾರದಲ್ಲಿ ವಿಪರೀತ ಮಳೆಯಿಂದ ಔಷಧ ಸಿಂಪಡಣೆಗೆ ಹೆಣಗಾಡುತ್ತಿದ್ದ ಅಡಕೆ ಕೃಷಿಕರಿಗೆ ಜೂನ್ ಮೊದಲ ವಾರ ಮಳೆಬಿಟ್ಟದ್ದು ಅನುಕೂಲವಾಯಿತು.

ಅರ್ಧಕ್ಕಿಂತ ಅಧಿಕ ತೋಟಗಳಲ್ಲಿ ಈಗಾಗಲೇ ಪ್ರಥಮ ಹಂತದ ಔಷಧ ಸಿಂಪಡಣೆ ಪೂರ್ಣಗೊಂಡಿದೆ. ಈ ಬಾರಿ ಉತ್ತಮ ಬೇಸಿಗೆ ಮಳೆಯಿಂದ ಅಡಕೆ ಬೇಗನೆ ಹಣ್ಣಾಗುವ ನಿರೀಕ್ಷೆ ಇದೆ. ನಳ್ಳಿ ಉದುರುವಿಕೆ ಕಡಿಮೆ ಇದ್ಧ ಕಾರಣ ಹಾಗೂ ನೀರಿನ ಕೊರತೆ ಕಂಡು ಬರದುದರಿಂದ ಹೆಚ್ಚಿನ ತೋಟಗಳಲ್ಲಿಉತ್ತಮ ಫಸಲು ಕಂಡು ಬರುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ವಾಣಿಜ್ಯ ಬೆಳೆಗಳಿಗೆ ಹೆಚ್ಚಿನ ಕೃಷಿಕರು ಆಸಕ್ತರಾಗಿದ್ದಾರೆ. ನಾವು ಪ್ರತಿ ವರ್ಷ ನಮ್ಮ ಹಿರಿಯರಿಂದ ಬಂದ ಸುಮಾರು ಐದು ಎಕರೆ ಪ್ರದೇಶದಲ್ಲಿ ವರ್ಷಕ್ಕೆ ಎರಡು ಬಾರಿ ಗದ್ದೆ ಬೇಸಾಯ ಮಾಡುತ್ತಿದ್ದೇವೆ. ಏಣೇಲು ಬಿತ್ತನೆಯ ಪೂರ್ವ ತಯಾರಿ ಸಂಪೂರ್ಣಗೊಂಡಿದೆ ಎಂದಿದ್ದಾರೆ ರಮಾನಂದ ಶರ್ಮ, ಗದ್ದೆ ಕೃಷಿಕ, ಗುರಿಪಳ್ಳ, ನಡ.

ತಾಲೂಕಿನಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಅಗತ್ಯ ಕೀಟನಾಶಕಗಳ ದಾಸ್ತಾನು ಸಾಕಷ್ಟು ಇದೆ. ಸಹಾಯಧನದಲ್ಲಿ ಬಿತ್ತನೆ ಬೀಜ ಲಭ್ಯವಿದ್ದು, ಆಸಕ್ತ ಕೃಷಿಕರು ಕಚೇರಿ ಸಮಯದಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದಿದ್ದಾರೆ ವೀರಭದ್ರಪ್ಪ ಎ.ಡಿ., ಸಹಾಯಕ ನಿರ್ದೇಶಕ, ಕೃಷಿ ಇಲಾಖೆ, ಬೆಳ್ತಂಗಡಿ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!