ಚಿಕ್ಕಮಗಳೂರು ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್ !

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ. ಕಸ್ಕೆಬೈಲು ಗ್ರಾಮದ ಸಮೀಪ ರಸ್ತೆಯಲ್ಲೇ ಕಾಡಾನೆಗಳು ತಂಗಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಅಲ್ಲದೆ ಕಾಫಿ ತೋಟಗಳಲ್ಲಿಯೂ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಕಾರ್ಮಿಕರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಬೀಟಮ್ಮ, ಭುವನೇಶ್ವರಿ ಹಾಗೂ ಭೀಮಾ ಗ್ಯಾಂಗ್ ಎಂದು ಗುರುತಿಸಲ್ಪಟ್ಟಿರುವ ಈ ಕಾಡಾನೆಗಳ ಹಿಂಡು ಕಸ್ಕೆಬೈಲು, ಕಲ್ಲುಗುಡ್ಡ, ಗಡಿ ಚೌಕ, ಕಮ್ಮರಗೋಡು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಓಡಾಟ ನಡೆಸುತ್ತಿವೆ. ಹಿಂಡಿನಿಂದ ಬೇರ್ಪಟ್ಟ ಕೆಲವು ಆನೆಗಳು ಅಲೆದಾಡುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಮೂಡಿಗೆರೆ ಅರಣ್ಯ ವಲಯ ಅಧಿಕಾರಿಗಳು ಸ್ಥಳದಲ್ಲೇ ಶಿಬಿರ ಹೂಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಗ್ರಾಮಸ್ಥರು ಅನಾವಶ್ಯಕವಾಗಿ ಹೊರಗೆ ಸಂಚರಿಸಬಾರದು, ರಾತ್ರಿ ವೇಳೆಯಲ್ಲಿ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!