ಸೊಸೆಗೆ ಬೆಂಕಿ ಹಚ್ಚಿ ಜೀವ ತೆಗೆದ ಅತ್ತೆ, ಮಾವ, ಗಂಡ..

ಲಕ್ನೋ: ನಿಕ್ಕಿ ಎನ್ನುವ ಮಹಿಳೆ ಜೀವ ಕಳೆದುಕೊಂಡವರು. ಈಕೆಯ ಗಂಡ ವಿಪಿನ್​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ನಂತರ ನಾಪತ್ತೆ ಆಗಿರುವ ಮಾವ, ಅತ್ತೆ ಮತ್ತು ಸೋದರ ಮಾವ ಈ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ವರದಕ್ಷಿಣೆಗಾಗಿ ಅತ್ತೆ, ಮಾವ ಹಾಗೂ ಗಂಡ ಸೇರಿ ಸೊಸೆಗೆ ಮನ ಬಂದಂತೆ ಹೊಡೆದು ಮನೆಯಲ್ಲೇ ಬೆಂಕಿ ಹಚ್ಚಿ ಜೀವ ತೆಗೆದಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಈಕೆಯ ಗಂಡ ವಿಪಿನ್​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ನಂತರ ನಾಪತ್ತೆ ಆಗಿರುವ ರೋಹಿತ್ (ಮಾವ), ದಯಾ (ಅತ್ತೆ) ಮತ್ತು ಸತ್ವೀರ್​ (ಸೋದರ ಮಾವ) ಈ ಮೂವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆ ನಿಕ್ಕಿ ಹಾಗೂ ಈಕೆಯ ಸಹೋದರಿ ಕಾಂಚಾಣ ಇಬ್ಬರು ಒಂದೇ ಮನೆಗೆ ಸೊಸೆಯಾಗಿದ್ದರು. ನಿಕ್ಕಿ ಹಾಗೂ ವಿಪಿನ್ 2016ರಲ್ಲಿ ಹರಿಯಾಣದ ಸಿರ್ಸಾದಲ್ಲಿ ಮದುವೆಯಾಗಿದ್ದರು. ಆದರೆ ಮದುವೆಯಲ್ಲಿ ವರದಕ್ಷಿಣೆಯಾಗಿ ಎಸ್​ಯುವಿ ಕಾರು, ಬೆಲೆಬಾಳುವ ಚಿನ್ನಾಭರಣಗಳನ್ನು ನೀಡಲಾಗಿತ್ತು. ಆದರೂ ವರದಕ್ಷಿಣೆಗಾಗಿ ಇಬ್ಬರಿಗೂ ಗಂಡನ ಮನೆಯವರು ಹೊಡೆಯುತ್ತಿದ್ದರು.

ತವರಿನಿಂದ ಹಣ ತರುವಂತೆ ಮನೆಯಲ್ಲಿ ನಿರಂತರ ಹಿಂಸೆ ಕೊಡುತ್ತಿದ್ದರು. ಹೀಗಾಗಿಯೇ ಮತ್ತೊಂದು ಕಾರನ್ನು ಕೂಡ ನೀಡಲಾಗಿತ್ತು ಎಂದು ಹೇಳಲಾಗಿದೆ. ಆದರೂ ಗಂಡನ ಮನೆಯವರ ವರದಕ್ಷಿಣೆಯ ಆಸೆ ನಿರಂತರವಾಗಿದ್ದರಿಂದ ಮನೆಯಲ್ಲಿ ಹೆಂಡತಿ ಜೊತೆ ವಿಪಿನ್ ಜಗಳ ತೆಗೆದು ಹೊಡೆದಿದ್ದಾನೆ. ಇದಕ್ಕೆ ಗಂಡನ ಪೋಷಕರು ಸಾಥ್ ಕೊಟ್ಟಿದ್ದಾರೆ. ಅದರಂತೆ ಗಂಡ ಹೊಡೆದು, ಕೋಪದಲ್ಲಿ ಹೆಂಡತಿಗೆ ಬೆಂಕಿ ಹಚ್ಚಿಬಿಟ್ಟಿದ್ದಾನೆ. ರಕ್ಷಣೆಗಾಗಿ ಬೆಂಕಿಯಲ್ಲೇ ಮಹಿಳೆ ಚೀರಾಡಿದ್ದಾಳೆ. ಈ ವೇಳೆ ಈಕೆಯ ಸಹೋದರಿಯನ್ನ ಹೊರಗಾಕಲಾಗಿತ್ತು. ಇದನ್ನು ನೋಡಿ ಸಹೋದರಿ ತೀವ್ರ ಭಯದಿಂದ ಕೂಗಿದ್ದಾಳೆ.

ತಕ್ಷಣ ಸ್ಥಳೀಯರು ಬಂದು ಮನೆ ಒಳಗೆ ತೀವ್ರ ಸುಟ್ಟ ಗಾಯಗಳಿಂದ ಬಿದ್ದಿದ್ದ ಮಹಿಳೆಯನ್ನ ರಕ್ಷಣೆ ಮಾಡಿ, ಗ್ರೇಟರ್ ನೋಯ್ಡಾದ ಫೋರ್ಟಿಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ದಾರಿ ಮಧ್ಯೆಯೇ ಮಹಿಳೆ ಜೀವ ಬಿಟ್ಟಿದ್ದಾಳೆ. ಸದ್ಯ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ನಿಕ್ಕಿಯ ಸಹೋದರಿ ಕಾಂಚಾಣ, ನನ್ನ ಸಹೋದರಿಗೆ ಆಕೆಯ ಗಂಡ ಮನಬಂದಂತೆ ಥಳಿಸಿದ್ದರಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಗ ವಿಪಿನ್ ಬೆಂಕಿ ಹಚ್ಚಿದ್ದಾನೆ. ವರದಕ್ಷಿಣೆಗಾಗಿ ನಮಗೆ ಹಿಂಸಿಸುತ್ತಿದ್ದರು. ಮದುವೆಯಲ್ಲಿ ಬ್ರ್ಯಾಂಡೆಡ್​​ ಎಸ್​ಯುವಿ ಕಾರು ಹಾಗೂ ಬೆಲೆಬಾಳುವ ಚಿನ್ನಾಭರಣಗಳನ್ನ ನೀಡಲಾಗಿದೆ. ಆದರೂ ನಿಕ್ಕಿ ಕಡೆಯವರು ಇನ್ನು ಬೇಕು ಎನ್ನುತ್ತಿದ್ದರು. ಮದುವೆ ನಂತರವೂ 35 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದರು ಎಂದಿದ್ದಾಳೆ. ಇದರ ಬದಲಿಗೆ ಮತ್ತೊಂದು ಕಾರನ್ನು ಇವರಿಗೆ ನೀಡಲಾಗಿತ್ತು. ಆದರೂ ಅವರ ಕಿರುಕುಳ, ಹಿಂಸೆ ನಿರಂತರವಾಗಿತ್ತು. ನಾನು ಸ್ಥಳದಲ್ಲೇ ಇದ್ದರೂ ಸಹೋದರಿಯನ್ನ ಉಳಿಸಿಕೊಳ್ಳಲು ಆಗಲಿಲ್ಲ. ಇಬ್ಬರು ಒಂದೇ ಬಾರಿ ಮದುವೆ ಆಗಿದ್ದೇವು. ಸ್ಥಳೀಯರ ಸಹಾಯದಿಂದ ನಿಕ್ಕಿಯನ್ನ ಆಸ್ಪತ್ರೆಗೆ ಕರೆದುಕೊಂಡು ಬಂದೇವು ಎಂದು ಕಾಂಚಾಣ ಹೇಳಿದ್ದಾರೆ.

ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ನಿಕ್ಕಿ ಅವರ ಮಗು ಹೇಳಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಪ್ಪನೇ ಮಮ್ಮಿಗೆ ಬೆಂಕಿ ಹಚ್ಚಿ ಜೀವ ತೆಗೆದಿದ್ದಾನೆ ಎಂದು ಮಗು ಹೇಳಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ವಿಪಿನ್ ಹಾಗೂ ಅವರ ಮನೆಯವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇನ್ನು ಸ್ಥಳೀಯರು ಕೂಡ ಆ ಕುಟುಂಬದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ ಎನ್ನಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!