ಗಡಿ ಜಿಲ್ಲೆಯ ಯುವಕರಿಗೆ “ಬೋಸ್” “ಲಾ” ಭಾಗ್ಯ!

 
  • ಸಂಸದ ಸುನೀಲ್ ಬೋಸ್ ಮನವಿಗೆ ಮನ್ನಣೆ 
  • ಚಾಮರಾಜನಗರಕ್ಕೆ ಲಾ ಕಾಲೇಜ್ ಮಂಜೂರು.
  • ಬೇಸಿಕ್ ಪೆಸಲಿಟಿ ಕೊಟ್ಟು ಲಾ ಕಾಲೇಜ್ ಅಪ್ರೂಲ್
  • ಚಾಮರಾಜ ನಗರ ಸಂಸದ ಸುನೀಲ್ ಬೋಸ್ ಶ್ರಮಕ್ಕೆ ಸಿಕ್ಕ ಪ್ರತಿಫಲ

 

ಚಾಮರಾಜನಗರ : ಚಾಮರಾಜನಗರದ ಸರಕಾರಿ ಕಾನೂನು ಕಾಲೇಜು ಆರಂಭಕ್ಕಾಗಿ ಅನುಮೋದನೆ ನೀಡುವಂತೆ ಲೋಕಸಭೆ ಸದಸ್ಯ ಸುನೀಲ್ ಬೋಸ್ ಹೊಸದಿಲ್ಲಿಯ బారా ಕೌನ್ಸಿಲ್ ಆಫ್ ಇಂಡಿಯಾಗೆ ಮಾಡಿದ್ದ ಮನವಿ ಪುರಸ್ಕೃತಗೊಂಡಿದ್ದು, ಪ್ರಸಕ್ತ ಸಾಲಿನಿಂದಲೇ ಮೂರು ವರ್ಷಗಳ ಪದವಿ ಕೋರ್ಸ್ ಪ್ರವೇಶಕ್ಕೆ ಅನುಮೋದನೆ ದೊರೆತಿದೆ.

 

 

 

 

ಮೂರು ವರ್ಷದ ಎಲ್‌ಎಲ್‌ಬಿ ಮತ್ತು ಐದು ವರ್ಷದ ಬಿಎ ಎಲ್ ಎಲ್‌ಬಿ ಕೋರ್ಸ್ಗೆ ಕರ್ನಾಟಕ ಸರಕಾರದ ಅನುಮತಿ ಪಡೆದುಕೊಂಡು ತಾತ್ಕಾಲಿಕವಾಗಿ ನಗರದ ಸಂತೇಮರಹಳ್ಳಿ ರಸ್ತೆಯಲ್ಲಿರುವ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಕಾನೂನು ಕಾಲೇಜು ಸ್ಥಾಪನೆಗೊಂಡಿತ್ತು.
ಹುಬ್ಬಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಸಂಯೋಜನೆ ಪಡೆದುಕೊಳ್ಳಲಾಗಿತ್ತು. ಭಾರತೀಯ ವಕೀಲರ ಪರಿಷತ್ (ಬಾರ್ ಕೌನ್ಸಿಲ್ ಆಫ್ ಇಂಡಿಯಾ) ಅನುಮೋದನೆಗಾಗಿ ಶುಲ್ಕವನ್ನು ಪಾವತಿಸಲಾಗಿತ್ತು.  ಕಳೆದ ಏ. 21ರಂದು ಸಂಸದ ಸುನೀಲ್ ಬೋಸ್ ಬಾರ್ ಕೌನ್ಸಿಲ್ ಆಫ್ ಇಂಡಿಯಾಗೆ ಪತ್ರ ಬರೆದು ನಗರದಲ್ಲಿ ಸರಕಾರಿ ಕಾನೂನು ಕಾಲೇಜು ಸ್ಥಾಪನೆ ಮತ್ತು ಅನುಮೋದನೆಯ ತುರ್ತು ಅಗತ್ಯವನ್ನು ವಿವರವಾಗಿ ಮನದಟ್ಟು ಮಾಡಿದ್ದರು.

 

 

 

 

 

 

 

 

 

ಪ್ರಸ್ತುತ ಬಾರ್ ಕೌನ್ಸಿಲ್ ನಗರದ ಕಾನೂನು 2025-26 ಸರಕಾರಿ ಕಾಲೇಜಿಗೆ ಹಾಗೂ 2026-27ನೇ ಶೈಕ್ಷಣಿಕ ಅವಧಿಗೆ 60 ವಿದ್ಯಾರ್ಥಿಗಳ ಒಂದು ವಿಭಾಗದ ಪ್ರವೇಶ ದೊಂದಿಗೆ ಮೂರು ವರ್ಷಗಳ ಎಲ್‌ಎಲ್‌ ಬಿ ಪದವಿ ಕೋರ್ಸ್‌ಗೆ ಹೊಸ ಅನುಮೋದನೆ ನೀಡಲಾಗಿದೆ ಎಂದು ಜೂ. 2ರಂದು ಹುಬ್ಬಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ನಗರದ ಸರಕಾರಿ ಕಾನೂನು ಕಾಲೇಜು ಪ್ರಾಂಶುಪಾಲರಿಗೆ ಪತ್ರದ ಮೂಲಕ ತಿಳಿಸಿದೆ.

 

 

 

 

 

 

 

(ಲೋಕಸಭೆ ಸದಸ್ಯ ಸುನೀಲ್ ಬೋಸ್)

ಕಾನೂನು ಕಾಲೇಜು ಆರಂಭದ ಹಿನ್ನೆಲೆಯಲ್ಲಿ ಸುನೀಲ್ ಬೋಸ್ ತಮ್ಮ ಸಂಸದರ ಕ್ಷೇತ್ರಾಭಿವೃದ್ಧಿ ನಿಧಿ ಯಿಂದ ಕಾನೂನು ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕ ಖರೀದಿಗಾಗಿ ಲಕ್ಷ ರೂ. ಒದಗಿಸಲು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್