“ಪಾರಂಪರಿಕತೆ” ಕುರಿತು ಶಾಲಾ ಮಕ್ಕಳಿಗೆ ಅರಿವು ಮೂಡಿಸಿದ ಸಂಸದ ಯದುವೀರ್.

ಮೈಸೂರು : ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸರ್ಕಾರಿ ಶಾಲಾ ಮಕ್ಕಳಿಗೆ ಪಾಠ ಮಾಡಿ ಪಾರಂಪರಿಕ‌ ಕಟ್ಟಡಗಳ ಕುರಿತು ಅರಿವು ಮೂಡಿಸಿದರು. ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಪಾಠಶಾಲೆಗೆ ಭೇಟಿ ನೀಡಿದ ಸಂಸದ ಯದುವೀರ್ ಅವರು, ಮಕ್ಕಳಿಗೆ ಪಾಠ- ಪ್ರವಚನ ಮಾಡಿದರು. ನಾವು ಪಾರಂಪರಿಕವಾಗಿ ಭಾರತೀಯ, ದಕ್ಷಿಣ ಭಾರತ, ಕರ್ನಾಟಕದ ಶೈಲಿ ಕಾಣಬಹುದು. ಪ್ಲಾಸ್ಟಿಕ್, ಸಿಮೆಂಟ್ ಇನ್ನಿತರೇ ಇವು ಪಾಶ್ಚಿಮಾತ್ಯ ಶೈಲಿ. ನಮ್ಮದೇ ಆದಂತಹ ಅನನ್ಯ ಶೈಲಿ ಉಲ್ಲೇಖಿಸಬೇಕಾಗಿದೆ. ನಮ್ಮ ಕಟ್ಟಡಗಳನ್ನ ಬೇರೆ ದೇಶಗಳಲ್ಲಿ ನೋಡಲು ಸಾಧ್ಯವಿಲ್ಲ. ಜಗತ್ತಿನಾದ್ಯಂತ ಹವಮಾನ ವೈಪರೀತ್ಯ ಉಂಟಾಗುತ್ತಿದೆ ಎಂದು ತಿಳಿಸಿದರು.

ನಮಗೆ ಗಾಳಿ, ಬೆಳಕು ಬಳಕೆ ಅಧಿಕವಾಗಿ ಬೇಕಾಗುತ್ತದೆ. ಹೀಗಾಗಿ ಈ ವಾತಾವರಣ ನಮಗೆ ಹೆಚ್ಚು ಅವಶ್ಯಕ.ಅದ್ದರಿಂದ ಒಳ್ಳೆ ರೀತಿಯ ಕಟ್ಟಡಗಳನ್ನ ಉಳಿಸಿ‌ ಬೆಳೆಸಿ. ಪೂರ್ವಜರ ಆಸೆ, ಕನಸು ಹಳೆಯ ಕಟ್ಟಡಗಳಲ್ಲಿ ಹುದುಗಿದೆ. ಅವರ ನಡವಳಿಕೆಯನ್ನ ,ಆಚಾರ ವಿಚಾರಗಳನ್ನು ಉಳಿಸಿ‌ ಬೆಳೆಸಬೇಕಾಗಿದೆ. ಮೈಸೂರು ಅಂದರೆ ಕೇವಲ ಅರಮನೆ ಅಷ್ಟೆ ಅಲ್ಲ. ಮೈಸೂರಿನ ಭಾವನೆ ಉಳಿಸಿ, ಮುಂದಿನ ಪೀಳಿಗೆಗೆ ಉಣಬಡಿಸಬೇಕಿದೆ ಎಂದು ನುಡಿದರು.

 

 

 

 

 

ನಾವು ಸ್ವದೇಶಿ, ಭಾರತೀಯ ಉತ್ಫನ್ನ ಹೆಚ್ಚಾಗಿ ಬಳಸಬೇಕಿದೆ. ಪ್ರತಿಯೊಬ್ಬ ಮಗುವು ದೇಸಿ ಉತ್ಪನ್ನಗಳ ಕಡೆಗೆ ಒಲವು ತೋರಬೇಕಿದೆ. ಜೀವನದಲ್ಲೂ ಕೂಡ ಸ್ವದೇಶ ವಸ್ತು ಬಳಸುವುದು ಅನುಕೂಲಕರ. ಓಕಲ್ ಫಾರ್ ಲೋಕಲ್ ಘೋಷಣೆಯಂತೆ ಸ್ವದೇಶಿಗೆ ಹೆಚ್ಚು ಮಹತ್ವ ನೀಡಿ. ಭಾರತಕ್ಕೆ ಹೆಚ್ಚು ಅನುಕೂಲವಾಗುವ ಉತ್ಪನ್ನಗಳನ್ನ ಬಳಸಿ ಎಂದು ಸಂಸದ ಯದುವೀರ್ ಕಿವಿಮಾತು ಹೇಳಿದರು.

ಮುಂದಿನ ಪೀಳಿಗೆಗೆ ಸ್ಮರಣೆ ಮಾಡುವ ಕೆಲಸ ಮಾಡಿ. ಪರಿಸರ ಉಳಿಸಿ, ಕಾಡು ಬೆಳೆಸಿ. ಪ್ರಕೃತಿ ಹಾಳು ಮಾಡುವ ಕೆಲಸ ಮಾಡಬೇಡಿ. ಕಾರ್ಬನ್ ಉತ್ಫಾದಿಸುವ ವಸ್ತುಗಳನ್ನ ಕಡಿಮೆ ಮಾಡಿ. ಮರಗಳನ್ನ ಹೆಚ್ಚೆಚ್ಚು ಬೆಳೆಸುವ ಕೆಲಸ ಮಾಡಿ. ತ್ಯಾಜ್ಯವಸ್ತುಗಳನ್ನ ಬಳಸಿ ಕಟ್ಟಡ ನಿರ್ಮಾಣ ಮಾಡಬಹುದು. ಅಂತಹ ಕ್ರಮಗಳತ್ತ ಎಲ್ಲರೂ ಚಿತ್ತ ಹರಿಸಿ ಎಂದು ಯದುವೀರ್ ತಿಳಿಸಿದರು.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು