ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್.

ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.

ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ ಯದುವೀರ್ ಖುದ್ದು ಪರಿಶೀಲನೆ ನಡೆಸಿದರು. ಆಷಾಢ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನಲೆಯನ್ನ ಸಂಸದ ಯದುವೀರ್ ಭೇಟಿ ನೀಡಿದ್ದು, 2000 ಟಿಕೆಟ್, 300 ರೂ ಟಿಕೆಟ್, ಸಾಮಾನ್ಯ ದರ್ಶನ ಭಾಗದಲ್ಲಿ ವೀಕ್ಷಣೆ ನಡೆಸಿದರು. ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ರೂಪ ಉಪಸ್ಥಿತರಿದ್ದು ಅವ್ಯವಸ್ಥೆ ಸರಿಪಡಿಸುವಂತೆ ಸೂಚಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್, ಬೆಟ್ಟದಲ್ಲಿ ಭಕ್ತಾಧಿಗಳಿಗೆ ಅವ್ಯವಸ್ಥೆ ಆಗಿದೆ ಎಂದು ದೂರು ಕೇಳಿ ಬಂದಿತ್ತು. ಅದರ ಪ್ರಯುಕ್ತ ಇಂದು ನಾನು ಒಬ್ಬ ಜನಪ್ರತಿನಿಧಿಯಾಗಿ ಭೇಟಿ ಮಾಡಿದ್ದೇನೆ. ಎಲ್ಲವನ್ನು ವೀಕ್ಷಣೆ ಮಾಡಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೋಡಿದ್ದೇನೆ. ದರ್ಶನ ಸಂದರ್ಭದಲ್ಲಿ ಸರಿಯಾಗಿ ವ್ಯವಸ್ಥೆ ಮಾಡಿಲ್ಲ, ಧರ್ಮ ದರ್ಶನ, ಟಿಕೆಟ್ ಪಡೆದು ಹೋಗುವವರು ಎಲ್ಲರಿಗೂ ಒಂದು ಕಡೆ ಬಂದು ಸೇರಿ ಸಾಕಷ್ಟು ಗೊಂದಲ ಉಂಟಾಗುತ್ತಿದೆ ಮತ್ತು ಪ್ರಸಾದ ವಿತರಣೆಯಲ್ಲೂ ಸರಿಯಾಗಿ ವಿತರಣೆ ಮಾಡಿತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

ಸ್ವಯಂ ನಿವೃತ್ತಿಗೆ ಪೊಲೀಸ್ ಅಧಿಕಾರಿ: ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ

ಸಿಎಂ ಸಿದ್ದರಾಮಯ್ಯ ಪೋಲಿಸ್ ಅಧಿಕಾರಿಗೆ ಗದರಿದ್ದ ವಿಚಾರ, ಸಿಎಂ ಬಹಿರಂಗವಾಗಿ ಬೈದ ಕಾರಣ ಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ಘೋಷಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಮೈಸೂರಿನ ಸಂಸದ ಯದುವೀರ್ ಒಡೆಯರ್, ಅವರು ಮಾನಸಿಕವಾಗಿ ಕುಗ್ಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಧಿಕಾರಿಗಳು ತಪ್ಪು ಮಾಡಿದ್ದರೆ, ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿ. ಈ ರೀತಿ ಬಹಿರಂಗವಾಗಿ ಅಧಿಕಾರಿಗೆ ಅವಮಾನ ಮಾಡುವುದು ಸರಿಯಲ್ಲ. ಇದು ನಮ್ಮ ರಾಜ್ಯದಲ್ಲಿ ಮಾತ್ರ ಅಲ್ಲ ಎಲ್ಲೂ ಆಗಬಾರದು ಅಧಿಕಾರಿಗಳು ಜನಪ್ರತಿನಿಧಿಗಳು ಪರಸ್ಪರ ಗೌರವ ಕೊಟ್ಟು ಕೆಲಸ ಮಾಡಬೇಕು. ಸಿಎಂ ಸಿದ್ದರಾಮಯ್ಯ ನಡೆದುಕೊಂಡು ರೀತಿ ಎಲ್ಲರೂ ಮಾಧ್ಯಮಗಳಲ್ಲಿ ನೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಆದೇಶ ಪಾಲಿಸಬೇಕು. ಒಂದು ವೇಳೆ ಪಾಲಿಸದಿದ್ದರೆ ಅದನ್ನ ಕೇಳಲು ಸಾಕಷ್ಟು ಮಾರ್ಗಗಳಿವೆ. ಅದನ್ನ ಬಿಟ್ಟು ನಿಂದಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು.

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲು ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಬರುವ ಭಕ್ತರಿಗೂ ಸಮಸ್ಯೆ ಆಗಬಾರದು. ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತೊಲ್ಲದೋ ದೇವಿಯ ಮೂಲ ವಿಗ್ರಹದ ವಿಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದರು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!