ಚಾಮುಂಡಿ ಬೆಟ್ಟದ ಆಷಾಡ ವ್ಯವಸ್ಥೆಯ ಖುದ್ದು ಪರಿಶೀಲನೆ ನಡೆಸಿದ ಸಂಸದ ಯದುವೀರ್.

ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.

ಆಷಾಡ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮಾಡಲಾಗಿರುವ ವ್ಯವಸ್ಥೆಯನ್ನ ಸಂಸದ ಯದುವೀರ್ ಖುದ್ದು ಪರಿಶೀಲನೆ ನಡೆಸಿದರು. ಆಷಾಢ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನಲೆಯನ್ನ ಸಂಸದ ಯದುವೀರ್ ಭೇಟಿ ನೀಡಿದ್ದು, 2000 ಟಿಕೆಟ್, 300 ರೂ ಟಿಕೆಟ್, ಸಾಮಾನ್ಯ ದರ್ಶನ ಭಾಗದಲ್ಲಿ ವೀಕ್ಷಣೆ ನಡೆಸಿದರು. ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ರೂಪ ಉಪಸ್ಥಿತರಿದ್ದು ಅವ್ಯವಸ್ಥೆ ಸರಿಪಡಿಸುವಂತೆ ಸೂಚಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್, ಬೆಟ್ಟದಲ್ಲಿ ಭಕ್ತಾಧಿಗಳಿಗೆ ಅವ್ಯವಸ್ಥೆ ಆಗಿದೆ ಎಂದು ದೂರು ಕೇಳಿ ಬಂದಿತ್ತು. ಅದರ ಪ್ರಯುಕ್ತ ಇಂದು ನಾನು ಒಬ್ಬ ಜನಪ್ರತಿನಿಧಿಯಾಗಿ ಭೇಟಿ ಮಾಡಿದ್ದೇನೆ. ಎಲ್ಲವನ್ನು ವೀಕ್ಷಣೆ ಮಾಡಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೋಡಿದ್ದೇನೆ. ದರ್ಶನ ಸಂದರ್ಭದಲ್ಲಿ ಸರಿಯಾಗಿ ವ್ಯವಸ್ಥೆ ಮಾಡಿಲ್ಲ, ಧರ್ಮ ದರ್ಶನ, ಟಿಕೆಟ್ ಪಡೆದು ಹೋಗುವವರು ಎಲ್ಲರಿಗೂ ಒಂದು ಕಡೆ ಬಂದು ಸೇರಿ ಸಾಕಷ್ಟು ಗೊಂದಲ ಉಂಟಾಗುತ್ತಿದೆ ಮತ್ತು ಪ್ರಸಾದ ವಿತರಣೆಯಲ್ಲೂ ಸರಿಯಾಗಿ ವಿತರಣೆ ಮಾಡಿತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.

ಸ್ವಯಂ ನಿವೃತ್ತಿಗೆ ಪೊಲೀಸ್ ಅಧಿಕಾರಿ: ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ

ಸಿಎಂ ಸಿದ್ದರಾಮಯ್ಯ ಪೋಲಿಸ್ ಅಧಿಕಾರಿಗೆ ಗದರಿದ್ದ ವಿಚಾರ, ಸಿಎಂ ಬಹಿರಂಗವಾಗಿ ಬೈದ ಕಾರಣ ಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ಘೋಷಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಮೈಸೂರಿನ ಸಂಸದ ಯದುವೀರ್ ಒಡೆಯರ್, ಅವರು ಮಾನಸಿಕವಾಗಿ ಕುಗ್ಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಧಿಕಾರಿಗಳು ತಪ್ಪು ಮಾಡಿದ್ದರೆ, ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿ. ಈ ರೀತಿ ಬಹಿರಂಗವಾಗಿ ಅಧಿಕಾರಿಗೆ ಅವಮಾನ ಮಾಡುವುದು ಸರಿಯಲ್ಲ. ಇದು ನಮ್ಮ ರಾಜ್ಯದಲ್ಲಿ ಮಾತ್ರ ಅಲ್ಲ ಎಲ್ಲೂ ಆಗಬಾರದು ಅಧಿಕಾರಿಗಳು ಜನಪ್ರತಿನಿಧಿಗಳು ಪರಸ್ಪರ ಗೌರವ ಕೊಟ್ಟು ಕೆಲಸ ಮಾಡಬೇಕು. ಸಿಎಂ ಸಿದ್ದರಾಮಯ್ಯ ನಡೆದುಕೊಂಡು ರೀತಿ ಎಲ್ಲರೂ ಮಾಧ್ಯಮಗಳಲ್ಲಿ ನೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಆದೇಶ ಪಾಲಿಸಬೇಕು. ಒಂದು ವೇಳೆ ಪಾಲಿಸದಿದ್ದರೆ ಅದನ್ನ ಕೇಳಲು ಸಾಕಷ್ಟು ಮಾರ್ಗಗಳಿವೆ. ಅದನ್ನ ಬಿಟ್ಟು ನಿಂದಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು.

ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲು ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು. ಇದರಿಂದ ಬರುವ ಭಕ್ತರಿಗೂ ಸಮಸ್ಯೆ ಆಗಬಾರದು. ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತೊಲ್ಲದೋ ದೇವಿಯ ಮೂಲ ವಿಗ್ರಹದ ವಿಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದರು.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು