ಮುಡಾ 50:50 ನಿವೇಶನ ಹಂಚಿಕೆ ಪ್ರಕರಣ: ನಿವೇಶನಗಳು ಅಮಾನತ್ತಿನಲ್ಲಿವೆ : ಸಿದ್ದರಾಮಯ್ಯ

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪ ಮಾಡಿದ್ದು ಸಿಬಿಐ ಗೆ ಪ್ರಕರಣ ಹಸ್ತಾಂತರ ಮಾಡಲು ಒತ್ತಾಯಿಸಿರುವ ಬಗ್ಗೆ ಮಾತನಾಡಿ ಎಲ್ಲವನ್ನೂ ಸಿಬಿಐ ಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ ಎಂದು ಪ್ರಶ್ನಿಸಿದರು. ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜಿನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜಿನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.

Related Posts

SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ?

ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ…

“ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನಿ, ಸಿಎಂಗಳಾಗುತ್ತಾರೆ”: ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ

ಮೈಸೂರು :ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಯೊಂದು ಈಗ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ‘ನಿಮ್ಮೊಂದಿಗೆ ಕಾಂಗ್ರೆಸ್: ನಿಮ್ಮ ಮತವನ್ನು ರಕ್ಷಿಸುವ ಕಡೆಗೆ’ ಎಂಬ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!