ಮುಡಾ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಮನವಿ.

ಮೈಸೂರು : (ಬಿಎಲ್ ಯು)-ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮನವಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಆದರೆ ಸಮನ್ಸ್ ಪಡೆ ಯಲು ಅಪಾಯಿಂಟ್‌ಮೆಂಟ್ ತೆಗೆದು ಕೊಂಡು ಬನ್ನಿ ಎಂದು ಸಿದ್ದರಾಮಯ್ಯ ಅವರ ಮನೆಯ ಭದ್ರತೆಗೆ ನಿಯೋ ಜಿಸಿರುವ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ನೇತೃತ್ವದ ವಿಭಾಗೀಯ ಪೀಠದಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಜುಲೈ 10 ರಂದು ನಡೆದ ವಿಚಾರಣೆ ವೇಳೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಖದ್ದು ಹಾಜರಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು. ಇಲ್ಲವೇ ನಿಮ್ಮ ವಕೀಲ ರಿಂದ ಅಭಿಪ್ರಾಯ ತಿಳಿಸಿ ಎಂದು ಹೈಕೋರ್ಟ್ ಪಾರ್ವತಿ ಅವರಿಗೆ ಸಮನ್ಸ್ ನೀಡಿದೆ.

ಈ ಸಂಬಂಧ ಇಂದು ನಮ್ಮ ವಕೀಲರ
ಮೂಲಕ ಸಮನ್ಸ್ ಜಾರಿ ಮಾಡಲು ಬೆಂಗಳೂರಿನ ವಿಜಯನಗರದ ಸಿದ್ದರಾಮಯ್ಯ ಅವರ ಮನೆಗೆ ಹೋಗಿದ್ದೆವು. ಆದರೆ ಪಾರ್ವತಿ ಅವರು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ವಾಸವಾಗಿದ್ದಾರೆ. ಅಲ್ಲಿಗೆ ಹೋಗಿ ಎಂದು ಸಲಹೆ ನೀಡಿದರು ಎಂದು ಸ್ನೇಹಮಯಿ ಕೃಷ್ಣ ಹೇಳಿದರು.

ತರುವಾಯ ಕಾವೇರಿ ನಿವಾಸಕ್ಕೆ ಹೋದಾಗ ಪಾರ್ವತಿ ಅವರು ಮನೆಯಲ್ಲಿ ಇಲ್ಲ ಎಂದು ಭದ್ರತೆಗೆ ನಿಯೋಜನೆ ಗೊಂಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ತಿಳಿಸಿ ದರು. ಇದು ಕೋರ್ಟ್ ಸಮನ್ಸ್ ಆಗಿರುವ ಕಾರಣ ಅವರನ್ನು ಖದ್ದು ಭೇಟಿ ಮಾಡಿ ನೀಡಬೇಕು ಎಂದು ತಿಳಿಸಿದ್ದೆವು. ಪಾರ್ವತಿ ಅವರನ್ನು ಭೇಟಿ ಮಾಡಬೇಕೆಂದರೆ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳ ಬೇಕು ಎಂದು ಇನ್ಸ್‌ಪೆಕ್ಟರ್ ಹೇಳಿದರು.

ಎಂತಹ ಪ್ರಭಾವಿಯಾದರೂ ಕೋರ್ಟ್ ಸಮನ್ಸ್ ನೀಡಲು ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳುವ ನಿಯಮ ಇಲ್ಲ. ಆದ ಕಾರಣ ಸೆಪ್ಟೆಂಬರ್ 4 ರಂದು ನಡೆಯುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗಳ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ವಿಚಾರವನ್ನು ಅಫಿಡವಿಟ್ ಮೂಲಕ ತಿಳಿಸು ತ್ತೇವೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!