ಮುಡಾ ಹಗರಣ : 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಖುಷಿ ಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ; ಈ ಭಾರಿ ಮೊತ್ತದ ಹಗರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.

ಶಾಸಕರು, ಸಿಎಂ ಪರಮಾಪ್ತರು ನಿನ್ನೆ ಪ್ರೆಸ್ ಮೀಟ್ ಮಾಡಿದ್ದಾರೆ. 92ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009- 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‍ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ಮಾಹಿತಿ ನೀಡಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!