ಮುಡಾ ಹಗರಣ : 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಖುಷಿ ಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ; ಈ ಭಾರಿ ಮೊತ್ತದ ಹಗರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.

ಶಾಸಕರು, ಸಿಎಂ ಪರಮಾಪ್ತರು ನಿನ್ನೆ ಪ್ರೆಸ್ ಮೀಟ್ ಮಾಡಿದ್ದಾರೆ. 92ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009- 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‍ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ಮಾಹಿತಿ ನೀಡಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!