ಕಾಂಗ್ರೆಸ್​-RJD ವೇದಿಕೆಯಲ್ಲಿ ನನ್ನ ತಾಯಿನ ನಿಂದಿಸಿದರು.. ಪ್ರಧಾನಿ ಹೇಳಿಕೆ ..

ಆರ್​ಜೆಡಿ ಹಾಗೂ ಕಾಂಗ್ರೆಸ್​ ವೇದಿಕೆಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು. ಇದು ಕೇವಲ ನನ್ನ ತಾಯಿ ಮಾತ್ರವಲ್ಲ, ಇಡೀ ದೇಶದ ತಾಯಂದಿರನ್ನು ಅಪಮಾನ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಅವರು ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ಬಿಹಾರ ರಾಜ್ಯ ಜೀವಿಕ್​ ನಿಧಿ ಸಾಖ್ ಸಹಕಾರಿ ಸಂಘ ಲಿಮಿಟೆಡ್​ ಉದ್ಘಾಟನೆ ಮಾಡಿದರು. ಬಳಿಕ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನನ್ನ ತಾಯಿ ದೇಶ ಸೇವೆ ಮಾಡು ಎಂದು ಆಶೀರ್ವಾದ ಮಾಡಿದ್ದಾಳೆ. ಪ್ರತಿ ತಾಯಿ ತನ್ನ ಮಗ, ತನ್ನ ಸೇವೆ ಮಾಡಲಿ ಎಂದು ಬಯಸುತ್ತಾಳೆ. ಅದರಂತೆ ದೇಶದ ತಾಯಂದಿರ ಸೇವೆ ಮಾಡು ಎಂದು ನನ್ನ ತಾಯಿ ಕಿವಿ ಮಾತು ಹೇಳಿದ್ದಳು. ಈಗ ನನ್ನ ತಾಯಿ ನನ್ನ ಜೊತೆ ಇಲ್ಲ, ನಮ್ಮನ್ನು ಬಿಟ್ಟು ಹೋಗಿದ್ದಾರೆ. ಆದರೆ ಆರ್​​ಜೆಡಿ-ಕಾಂಗ್ರೆಸ್​ ವೇದಿಕೆಯಲ್ಲಿ ನನ್ನ ತಾಯಿಯನ್ನು ನಿಂದಿಸಲಾಯಿತು. ಇದು ತುಂಬಾ ಕಷ್ಟ, ದುಃಖ ಕೊಡುತ್ತದೆ ಎಂದು ಹೇಳಿದ್ದಾರೆ.

 

ತಾಯಿ ಎಂದರೆ ನಮ್ಮ ಸಂಸಾರ, ಪ್ರಪಂಚ. ತಾಯಿ ನಮ್ಮ ಸ್ವಾಭಿಮಾನಿ, ಆತ್ಮಗೌರವ ಆಗಿರುತ್ತಾಳೆ. ಸಮೃದ್ಧವಾದ ಸಂಸ್ಕೃತಿ ಹೊಂದಿರುವ ಬಿಹಾರದಲ್ಲಿ ಕೆಲವು ದಿನಗಳ ಹಿಂದೆ ನಡೆದಂತಹದ್ದನ್ನು ನಾನು ಯಾವಾತ್ತು ಕೂಡ ಕಲ್ಪನೆ ಕೂಡ ಮಾಡಿರಲಿಲ್ಲ. ಬಿಹಾರದ ಯಾವೊಬ್ಬ ತಾಯಿ, ತಂಗಿಯರಿಗೆ, ದೇಶದ ಜನರಿಗೆ ಈ ಕಲ್ಪನೆ ಬಂದಿರಲಿಲ್ಲ. ಆದರೆ ಬಿಹಾರದಲ್ಲಿ ಆರ್​​ಜೆಡಿ- ಕಾಂಗ್ರೆಸ್​ ವತಿಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು ಎಂದು ಪ್ರಧಾನಿ ಮೋದಿಯವರು ಆರೋಪ ಮಾಡಿದ್ದಾರೆ.

ಈ ನಿಂದನೆ ಕೇವಲ ನನ್ನ ತಾಯಿಯನ್ನು ಅಪಮಾನ ಮಾಡಿದಂತೆ ಅಲ್ಲ. ಇಡೀ ದೇಶದ ತಾಯಿ, ಅಕ್ಕ, ತಂಗಿ, ಮಗಳಿಗೆ ಮಾಡಿದಂತ ಅಪಮಾನ ಆಗಿದೆ. ಕಾಂಗ್ರೆಸ್​-ಆರ್​​ಜೆಡಿ ಹೇಳಿದ್ದು ಬಿಹಾರದ ಪತ್ರಿ ಮಹಿಳೆಯರಿಗೆ, ಪುರುಷರಿಗೆ ಬೇಸರ ಆಗಿದೆ. ನಾನು ನಿಮ್ಮ ಮಗನಿದ್ದೇನೆ. ಇಷ್ಟೊಂದು ತಾಯಂದಿರ, ಸಹೋದರಿಯರ ನಮ್ಮ ಮುಂದೆ ಇದ್ದಾರೆ. ಇವತ್ತು ನನ್ನ ಮನಸನ್ನು, ನನ್ನ ದುಃಖವನ್ನು ನಿಮ್ಮ ಮುಂದೆ ಹೇಳಿದ್ದೇನೆ. ಇದಕ್ಕೆ ತಾಯಂದಿರ ಆಶೀರ್ವಾದ ಬೇಕು ಅಂತ ಪ್ರಧಾನಿ ಮೋದಿ ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!