ಪ್ರೆಸ್ ಮೀಟ್ ಮಾಡಲು ಬಂದ ಮಹಿಳೆಯನ್ನು ಪೋಲಿಸ್ ಠಾಣೆಗೆ ಕಳುಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ರಿಂದ ದೌರ್ಜನ್ಯ ಆರೋಪ ಸ್ವತಃ ಕೆ.ದೀಪಕ್ ಮೊದಲ ಪತ್ನಿಯಿಂದ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು ಪತ್ರಕರ್ತರ ಸಂಘದ ಕೆ.ದೀಪಕ್ ಅವರ ಮೊದಲ ಪತ್ನಿ ಪೂರ್ಣಿಮಾ. ಬೆಳಗ್ಗೆ 11 ಗಂಟೆ ಸಮಯಕ್ಕೆ ಪ್ರೆಸ್ ಕ್ಲಬ್ ಬಳಿ ಬಂದ ಕಾದು ನಿಂತಿದ್ದಾರೆ. ಪ್ರೆಸ್ ಮೀಟ್ ಮಾಡಲು ಬಂದ ಕೆ.ದೀಪಕ್ ಮೊದಲ ಪತ್ನಿಯನ್ನ ಪೋಲಿಸ್ ಠಾಣೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಕೆ.ದೀಪಕ್ ಮೊದಲ ಪತ್ನಿಗೆ ಕಾನೂನಾತ್ಮಕ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದೇನೆ ಎಂದು ಇತ್ತೀಚಿಗೆ ಹೇಳಿಕೆ ಕೊಟ್ಟಿದ್ದ , ವಿಚ್ಛೇದನ ಆಗಿಲ್ಲ ಈಗಲೂ ದೀಪಕ್ ನನ್ನ ಗಂಡನೇ ಎಂದು ಕಾನೂನು ಸಮರಕ್ಕೆ ಮೊದಲ ಪತ್ನಿ ಪೂರ್ಣಿಮಾ ಮುಂದಾಗಿದ್ದಾರೆ.

ತನ್ನ ಗಂಡ ತನಗೆ ಮಾಡಿರುವ ಅನ್ಯಾಯದ ಬಗ್ಗೆ ಸುದ್ದಿ ಗೋಷ್ಠಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ಗಂಟೆವರೆಗೂ ಪಟ್ಟು ಹಿಡಿದು ಕೂತ ಪೂರ್ಣಿಮಾ ಅವರಿಗೆ ಪ್ರಕರಣ ಕೋರ್ಟಿನಲ್ಲಿರುವುದರಿಂದ ಪ್ರೆಸ್ ಮೀಟ್ ಗೆ ಅವಕಾಶ ಕೊಡಲಾಗುವುದಿಲ್ಲ ಎಂಬ ಕಾರಣವೊಡ್ಡಿ ಪ್ರೆಸ್ ಕ್ಲಬ್ ಸಿಬ್ಬಂದಿ. ಸುದ್ದಿ ಗೋಷ್ಠಿಗೆ ಅವಕಾಶ ನೀಡದೇ ಪೋಲಿಸ್ ಠಾಣೆಗೆ ಕಳುಹಿಸಿದ್ದಾರೆ.

ಪಟ್ಟು ಹಿಡಿದು ಅಲ್ಲೇ ಕೂತ ಪೂರ್ಣಿಮಾ ವಿರುದ್ಧ ಪ್ರೆಸ್ ಕ್ಲಬ್ ನ ಸಿಬ್ಬಂದಿಯಿಂದ ಕೆ.ಆರ್ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಕೆ.ಆರ್ ಪೋಲಿಸ್ ಠಾಣೆಗೆ ಆಗಮಿಸಿದ ಪೂರ್ಣಿಮಾ ದೀಪಕ್ ನಾನು ಪ್ರೆಸ್ ಕ್ಲಬ್ ನಲ್ಲೇ ಸುದ್ದಿ ಗೋಷ್ಠಿ ಮಾಡುತ್ತೇನೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದು ಪೋಲಿಸರ ಜೊತೆ ಮಾತುಕತೆ ನಡೆಸಿ ಹೋಗಿದ್ದಾರೆ. ಅನ್ಯಾಯಕ್ಕೆ ಒಳಗಾದ ಮಹಿಳೆಗೆ ಅವಕಾಶ ಕೊಡುವುದಿಲ್ಲ ಅಂದರೆ ಹೇಗೆ.? ವಾಕ್ ಸ್ವಾತಂತ್ರ್ಯ ಇಲ್ಲವ.? ಎಂದು ದೀಪಕ್ ವಿರುದ್ಧ ಮೊದಲ ಪತ್ನಿ ಪೂರ್ಣಿಮಾ ದೀಪಕ್ ಹರಿಹಾಯ್ದ ನಡೆದ್ದಿದ್ದರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್