ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆಯಿಂದ ಅಹೋರಾತ್ರಿ ಧರಣಿ.

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿದ್ದು, ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆ ಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ ಎಂದು ಆರೋಪಿಸಿ ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧನಾ ವಿದ್ಯಾರ್ಥಿ ಗಳ ಸಂಘಟನೆಯ ವತಿಯಿಂದ ಕ್ರಾಪರ್ಡ್ ಹಾಲ್ ಮುಂಭಾಗ ಮಂಗಳವಾರದಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ಪ್ರಾಧ್ಯಾಪಕರ ಕೊರತೆಯಿಂದ ಪಿಹೆಚ್.ಡಿ. ಕೆ-ಸೆಟ್. ನೀಟ್. ಜೆಆ‌ರ್.ಎ ಉತ್ತೀರ್ಣ ರಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯ ದಲ್ಲಿ ಪಿಹೆಚ್.ಡಿ ಮಾಡಲು ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಕಾಯಂ ಪ್ರಾಧ್ಯಾಪಕರ ಬಳಿಯೇ . ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಹೆಚ್.ಡಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಸೀಟುಗಳನ್ನು ನೀಡಿ ಸಂಶೋಧನೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಶೋಧನಾ ಆಕಾಂಕ್ಷಿಗಳ ಬೇಡಿಕೆಗಳು:

ಪಿಹೆಚ್.ಡಿ ಮಾರ್ಗದರ್ಶನಕ್ಕೆ ಹೆಚ್ಚುವರಿ ದಾಖಲಾತಿ ಕೊಡಬೇಕು. ವಿಶ್ವವಿದ್ಯಾನಿಲಯ ದಲ್ಲಿ ಸಾಮಾಜಿಕ ವಿಜ್ಞಾನದಲ್ಲಿ ಪಿಹೆಚ್.ಡಿ ಮಾರ್ಗದರ್ಶಕರ ಕೊರತೆ ಇರುವುದರಿಂದ ಕೇಂದ್ರದ ಯುಜಿಸಿ ಮಾರ್ಗಸೂಚಿಯ ಪ್ರಕಾರ ಇತರೆ ವಿಶ್ವವಿದ್ಯಾನಿಲಯಗಳ ಸಾಮಾಜಿಕ ಅಧ್ಯಯನ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಿಗೆ ನೀಡಿರುವಂತೆ ಇಲ್ಲಿಯೂ ನೀಡಬೇಕು  ಎಂದು ಒತ್ತಾಯಿಸಿದ್ದಾರೆ.

ಇದರಿಂದ ವಿಶ್ವವಿದ್ಯಾನಿಲಯಕ್ಕೆ ಯಾವುದೇ ಆರ್ಥಿಕ ಹೊಣೆಗಾರಿಕೆ ಇರುವುದಿಲ್ಲ ಮತ್ತು ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಸಹ ಪ್ರಾಧ್ಯಾಪಕರಿಗೆ ಸಂಶೋಧನಾ ವಿದ್ಯಾರ್ಥಿ ಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ನೀಡಬೇಕು. ಪ್ರಾಧ್ಯಾಪಕರಾಗಿದ್ದು ಮಾರ್ಗ ದರ್ಶನ ಪಡೆಯದೆ ಇರುವ ಪ್ರಾಧ್ಯಾಪಕ ರಿಗೆ ಮಾರ್ಗದರ್ಶನ ಮಾಡುವುದಕ್ಕೆ ಸಲಹೆ ನೀಡಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ಸಂಶೋಧನಾ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಮರಳಿ ಮಹೇಶ್, ಹಿರಿಯ ಹೋರಾಟಗಾರರು ಚೋರ್ನಳ್ಳಿ ಶಿವಣ್ಣ, ಯುವ ಹೋರಾಟಗಾರ ಪ್ರದೀಪ್  ಮುಮ್ಮಾಡಿ  ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ  ದಲಿತ ಸಂಶೋಧಕ ಸಂಘ ಇನ್ನಿತರರು ಪಾಲ್ಗೊಂಡಿದ್ದರು.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!