ನಮ್ಮ ಮೆಟ್ರೋ ನಿಲ್ದಾಣಗಳಿಗೂ ಬಂತು `ನಂದಿನಿ’ ಪಾರ್ಲರ್… 175ಕ್ಕೂ ಹೆಚ್ಚು ಉತ್ಪನ್ನಗಳ ಮಾರಾಟ !

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇದೀಗ ನಂದಿನಿ ಪಾರ್ಲರ್‌ಗಳು ಆರಂಭವಾಗಿದ್ದು, 175ಕ್ಕೂ ಅಧಿಕ ನಂದಿನಿ ಉತ್ಪನ್ನಗಳು ಗ್ರಾಹಕರಿಗೆ ಲಭ್ಯವಾಗುತ್ತಿವೆ.

ಹೌದು, ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ಹೆಮ್ಮೆಯ ನಂದಿನಿ ಪಾರ್ಲರ್‌ಗೆ ಅವಕಾಶ ಕೊಡದೇ ಅಮುಲ್ ಪಾರ್ಲರ್‌ಗಳಿಗೆ ಅವಕಾಶ ಕೊಟ್ಟಿದೆ ಎಂದು ದೊಡ್ಡ ಮಟ್ಟದ ಪ್ರತಿರೋಧ ವ್ಯಕ್ತವಾಗಿತ್ತು. ಇದೆಲ್ಲದರ ನಂತರ ಕಡೆಗೂ ನಂದಿನಿ ಪಾರ್ಲರ್‌ಗಳು ಮೆಟ್ರೋ ನಿಲ್ದಾಣದಲ್ಲಿ ಕಾರ್ಯಾರಂಭ ಮಾಡಿವೆ.ಇದನ್ನೂ ಓದಿ: ಕರ್ನಾಟಕದ ಗಡಿಯಿಂದ 19 ಕಿ.ಮೀ ದೂರದಲ್ಲಿ ನಿರ್ಮಾಣವಾಗಲಿದೆ ಹೊಸೂರು ವಿಮಾನ ನಿಲ್ದಾಣ!

ಕೆಎಂಎಫ್ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿಲ್ಲದೇ ಇದ್ದದ್ದೇ ಇದಕ್ಕೆ ಕಾರಣ ಅನ್ನೋದು ಗೊತ್ತಾಗಿತ್ತು. ಬೆಂಗಳೂರು ಮೆಟ್ರೋ ರೈಲು ನಿಗಮ ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಪಕ್ಷಪಾತ ಮಾಡಿಲ್ಲ ಎಂದು ಸ್ಪಷ್ಟಪಡಿಸಿತ್ತು. ನಂತರ ನಂದಿನಿ ಪಾರ್ಲರ್‌ಗೆ 10 ಕಡೆ ಅವಕಾಶ ಮಾಡಿಕೊಡಲಾಗಿತ್ತು. ಈಗ ಕೊನೆಗೂ ಮೂರು ಕಡೆ ನಂದಿನಿ ಪಾರ್ಲರ್‌ಗಳು ಆರಂಭವಾಗಿದ್ದು, ಭರ್ಜರಿ ರೆಸ್ಪಾನ್ಸ್ ದೊರೆಯುತ್ತಿದೆ.

ಪ್ರಾರಂಭಿಕವಾಗಿ ಮೂರು ಪಾರ್ಲರ್‌ಗಳನ್ನ ಸಿಎಂ, ಕೆಎಂಎಫ್ ಎಂಡಿ ಹಾಗೂ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಅವರು ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಉದ್ಘಾಟನೆ ಮಾಡಿದರು. ಅದರಂತೆ ಮೆಜೆಸ್ಟಿಕ್, ಕೋಣನಕುಂಟೆ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜು ಬಳಿ ಪ್ರಾರಂಭಗೊಂಡಿವೆ.

ಇನ್ನು ಈ ನಂದಿನಿ ಪಾರ್ಲರ್‌ಗಳಲ್ಲಿ ಸುಮಾರು 175ಕ್ಕೂ ಹೆಚ್ಚು ನಂದಿನಿ ಉತ್ಪನ್ನಗಳು ದೊರೆಯುತ್ತಿವೆ. ಇದರ ಜೊತೆಗೆ ಹಲವು ಹೊಸ ಉತ್ಪನ್ನಗಳನ್ನೂ ಪರಿಚಯಿಸಲಾಗಿದೆ. ಗೌರಿ-ಗಣೇಶ ಹಬ್ಬ, ದಸರಾ ಹಬ್ಬಗಳಲ್ಲಿ ಹೆಚ್ಚಾಗಿ ನಂದಿನಿ ಉತ್ಪನ್ನ ಬಳಸಿ ನಮ್ಮ ರೈತರಿಗೆ ಪರೋಕ್ಷವಾಗಿ ಸಪೋರ್ಟ್ ಮಾಡಿ ಎಂದು ಕೆಎಂಎಫ್ ಎಂಡಿ ತಿಳಿಸಿದ್ದಾರೆ.

ಇನ್ನುಳಿದ 7 ಪಾರ್ಲರ್‌ಗಳನ್ನು ಆದಷ್ಟು ಬೇಗ ಶುರು ಮಾಡಲು ಸಿದ್ಧತೆತೆಗಳು ನಡೆಯುತ್ತಿದ್ದು, ಇನ್ನಷ್ಟು ನಿಲ್ದಾಣಗಳಲ್ಲಿ ನಂದಿನಿ ಪಾರ್ಲರ್ ಪ್ರಾರಂಭಿಸಲು ಕೆಎಂಎಫ್ ಜಾಗ ಕೇಳಲು ನಿರ್ಧರಿಸಿದೆ. ಜೊತೆಗೆ ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿ 500ಕ್ಕೂ ಹೆಚ್ಚು ಪಾರ್ಲರ್ ಶುರು ಮಾಡುವ ಗುರಿಯನ್ನು ಕೆಎಂಎಫ್ ಹೊಂದಿದೆ.ಇದನ್ನೂ ಓದಿ: ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪೊಲೀಸರಿಂದ ತೀವ್ರ ಶೋಧ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!