ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ವಾಷಿಂಗ್ಟನ್‌: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ ಈಗ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕವನ್ನು ಇರಿಸಿದ ವಿಚಾರ ಬೆಳಕಿಗೆ ಬಂದಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್‌ ಮೈನ್ಸ್‌ ಹಾಕಿದ್ದರೆ ತಕ್ಷಣವೇ ತೆಗೆದು ಹಾಕಬೇಕು. ಒಂದು ವೇಳೆ ತೆಗೆಯದೇ ಇದ್ದರೆ ಹಿಂದೆಂದು ಕಾಣದ ರೀತಿಯಲ್ಲಿ ಇರಾನ್‌ ಮೇಲೆ ಮಿಲಿಟರಿ ದಾಳಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌ ಹಾಕುತ್ತಿದ್ದ ಇರಾನಿನ 16 ಹಡಗುಗಳನ್ನು ತಾನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ

ಏನಿದು ನೇವಲ್‌ ಮೈನ್ಸ್‌?
ನಕ್ಸಲೈಟ್‌ಗಳು, ಉಗ್ರಗಾಮಿಗಳು ಭೂಮಿ ಒಳಗಡೆ ಬಾಂಬ್‌ ಇಡುವುದನ್ನು ನೀವು ಓದಿರಬಹುದು. ಈ ನೆಲಬಾಂಬ್‌ ಹುದುಗಿಸಿದ ಜಾಗದ ಮೇಲೆ ಕಾಲು ಇಟ್ಟಾಗ ಅಥವಾ ವಾಹನಗಳು ಸಂಚರಿಸಿದಾಗ ಒತ್ತಡದಿಂದ ಅದು ಸ್ಫೋಟಗೊಳ್ಳುತ್ತದೆ. ಅದೇ ರೀತಿಯಾಗಿ ನೀರಿನ ಒಳಗಡೆಯೂ ಸ್ಫೋಟಕಗಳನ್ನು ಇರಿಸಿ ಹಡಗುಗಳು, ಜಲಾಂತರ್ಗಾಮಿಗಳನ್ನು ನಾಶ ಮಾಡಲು ನೇವಲ್‌ ಮೈನ್ಸ್‌ ಬಳಕೆ ಮಾಡಲಾಗುತ್ತದೆ. ಹಡಗುಗಳು ಅವುಗಳ ಸಂಪರ್ಕಕ್ಕೆ ಬಂದಾಗ ಅಥವಾ ಅವುಗಳ ಹತ್ತಿರ ಸುಳಿದಾಗ ಸ್ಫೋಟಗೊಳ್ಳುವಂತೆ ವಿನ್ಯಾಸ ಮಾಡಲಾಗಿರುತ್ತದೆ.ಈ ಮೈನ್‌ಗಳನ್ನು ರಕ್ಷಣಾತ್ಮಕವಾಗಿ (ತನ್ನದೇ ಆದ ಹಡಗುಗಳನ್ನು ರಕ್ಷಿಸಲು) ಅಥವಾ ಆಕ್ರಮಣಕಾರಿಯಾಗಿ (ಶತ್ರುಗಳ ಹಡಗುಗಳ ಸಂಚಾರವನ್ನು ತಡೆಯಲು) ಬಳಸಲಾಗುತ್ತದೆ.

ಯಾವ ರೀತಿ ಇರುತ್ತೆ?
ಕೆಲವು ಮೈನ್‌ಗಳನ್ನು ಸಮುದ್ರದ ತಳಕ್ಕೆ ಹಾಕಿದ್ದರೆ, ಇನ್ನು ಕೆಲವು ನೀರಿನಲ್ಲಿ ತೇಲುತ್ತಿರುತ್ತವೆ. ಈ ಸ್ಫೋಟಕಗಳನ್ನು ತಾಗಿದಾಗ ಸ್ಫೋಟಗೊಳ್ಳುತ್ತದೆ. ಹಡಗು ಸಂಚರಿಸುತ್ತಿದ್ದಾಗ ಕಾಂತೀಯ ಕ್ಷೇತ್ರ, ಪ್ರೊಪೆಲ್ಲರ್‌ ಶಬ್ಧ ನೀರಿನ ಒತ್ತಡದಲ್ಲಿನ ಬದಲಾವಣೆಗಳನ್ನು ಪತ್ತೆಹಚ್ಚಿ ಸ್ಫೋಟಗೊಳ್ಳುವಂತೆ ರೂಪಿಸಲಾಗಿರುತ್ತದೆ.

ಇವುಗಳನ್ನು ವಿಶೇಷ ಹಡಗುಗಳು, ಜಲಾಂತರ್ಗಾಮಿಗಳು ಅಥವಾ ವಿಮಾನಗಳ ಮೂಲಕ ಸಮುದ್ರಕ್ಕೆ ಹಾಕಲಾಗುತ್ತದೆ. ಇವುಗಳು ಕ್ಷಿಪಣಿಗಳಿಗಿಂತ ಕಡಿಮೆ ವೆಚ್ಚದಾಯಕವಾಗಿದೆ ಮಾತ್ರವಲ್ಲ ಶತ್ರು ಹಡಗುಗಳಿಗೆ ಭಾರಿ ಹಾನಿ ಉಂಟುಮಾಡುತ್ತದೆ.

ಇರಾನ್‌ ದೇಶೀಯವಾಗಿ ನೇವಲ್‌ ಮೈನ್ಸ್‌ ತಯಾರಿಸುವ ಸಾಮರ್ಥ್ಯ ಹೊಂದಿದೆ. ಕೆಲವು ಸುಧಾರಿತ ವಿನ್ಯಾಸಗಳನ್ನು ರಷ್ಯಾ, ಚೀನಾ ಅಥವಾ ಉತ್ತರ ಕೊರಿಯಾದಲ್ಲಿ ಅಭಿವೃದ್ಧಿಪಡಿಸಿದ ವ್ಯವಸ್ಥೆಗಳಿಂದ ಪಡೆದಿದೆ ಎನ್ನಲಾಗುತ್ತಿದೆ.
ಅಮೆರಿಕ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಮ್ಯಾರಿಟೈಮ್ ಸೆಕ್ಯುರಿಟಿಯ ಪ್ರಕಾರ ಇರಾನ್ ಸುಮಾರು 2,000 ರಿಂದ 5,000 ನೇವಲ್‌ ಮೈನ್ಸ್‌ ಹೊಂದಿರುವ ಸಾಧ್ಯತೆಯಿದೆ.

Related Posts

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ದಶಕಗಳ ಕಾಲದ ಬೇಡಿಕೆಯಾದ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಆಗಸ್ಟ್ 19ರಂದು ಕೈಗೊಂಡ ನಿರ್ಧಾರದಂತೆ, ಶಿಕ್ಷಣ ಮತ್ತು ಉದ್ಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ…

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

You Missed

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.