ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ವಾಷಿಂಗ್ಟನ್‌: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ ಈಗ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕವನ್ನು ಇರಿಸಿದ ವಿಚಾರ ಬೆಳಕಿಗೆ ಬಂದಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್‌ ಮೈನ್ಸ್‌ ಹಾಕಿದ್ದರೆ ತಕ್ಷಣವೇ ತೆಗೆದು ಹಾಕಬೇಕು. ಒಂದು ವೇಳೆ ತೆಗೆಯದೇ ಇದ್ದರೆ ಹಿಂದೆಂದು ಕಾಣದ ರೀತಿಯಲ್ಲಿ ಇರಾನ್‌ ಮೇಲೆ ಮಿಲಿಟರಿ ದಾಳಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌ ಹಾಕುತ್ತಿದ್ದ ಇರಾನಿನ 16 ಹಡಗುಗಳನ್ನು ತಾನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ

ಏನಿದು ನೇವಲ್‌ ಮೈನ್ಸ್‌?
ನಕ್ಸಲೈಟ್‌ಗಳು, ಉಗ್ರಗಾಮಿಗಳು ಭೂಮಿ ಒಳಗಡೆ ಬಾಂಬ್‌ ಇಡುವುದನ್ನು ನೀವು ಓದಿರಬಹುದು. ಈ ನೆಲಬಾಂಬ್‌ ಹುದುಗಿಸಿದ ಜಾಗದ ಮೇಲೆ ಕಾಲು ಇಟ್ಟಾಗ ಅಥವಾ ವಾಹನಗಳು ಸಂಚರಿಸಿದಾಗ ಒತ್ತಡದಿಂದ ಅದು ಸ್ಫೋಟಗೊಳ್ಳುತ್ತದೆ. ಅದೇ ರೀತಿಯಾಗಿ ನೀರಿನ ಒಳಗಡೆಯೂ ಸ್ಫೋಟಕಗಳನ್ನು ಇರಿಸಿ ಹಡಗುಗಳು, ಜಲಾಂತರ್ಗಾಮಿಗಳನ್ನು ನಾಶ ಮಾಡಲು ನೇವಲ್‌ ಮೈನ್ಸ್‌ ಬಳಕೆ ಮಾಡಲಾಗುತ್ತದೆ. ಹಡಗುಗಳು ಅವುಗಳ ಸಂಪರ್ಕಕ್ಕೆ ಬಂದಾಗ ಅಥವಾ ಅವುಗಳ ಹತ್ತಿರ ಸುಳಿದಾಗ ಸ್ಫೋಟಗೊಳ್ಳುವಂತೆ ವಿನ್ಯಾಸ ಮಾಡಲಾಗಿರುತ್ತದೆ.ಈ ಮೈನ್‌ಗಳನ್ನು ರಕ್ಷಣಾತ್ಮಕವಾಗಿ (ತನ್ನದೇ ಆದ ಹಡಗುಗಳನ್ನು ರಕ್ಷಿಸಲು) ಅಥವಾ ಆಕ್ರಮಣಕಾರಿಯಾಗಿ (ಶತ್ರುಗಳ ಹಡಗುಗಳ ಸಂಚಾರವನ್ನು ತಡೆಯಲು) ಬಳಸಲಾಗುತ್ತದೆ.

ಯಾವ ರೀತಿ ಇರುತ್ತೆ?
ಕೆಲವು ಮೈನ್‌ಗಳನ್ನು ಸಮುದ್ರದ ತಳಕ್ಕೆ ಹಾಕಿದ್ದರೆ, ಇನ್ನು ಕೆಲವು ನೀರಿನಲ್ಲಿ ತೇಲುತ್ತಿರುತ್ತವೆ. ಈ ಸ್ಫೋಟಕಗಳನ್ನು ತಾಗಿದಾಗ ಸ್ಫೋಟಗೊಳ್ಳುತ್ತದೆ. ಹಡಗು ಸಂಚರಿಸುತ್ತಿದ್ದಾಗ ಕಾಂತೀಯ ಕ್ಷೇತ್ರ, ಪ್ರೊಪೆಲ್ಲರ್‌ ಶಬ್ಧ ನೀರಿನ ಒತ್ತಡದಲ್ಲಿನ ಬದಲಾವಣೆಗಳನ್ನು ಪತ್ತೆಹಚ್ಚಿ ಸ್ಫೋಟಗೊಳ್ಳುವಂತೆ ರೂಪಿಸಲಾಗಿರುತ್ತದೆ.

ಇವುಗಳನ್ನು ವಿಶೇಷ ಹಡಗುಗಳು, ಜಲಾಂತರ್ಗಾಮಿಗಳು ಅಥವಾ ವಿಮಾನಗಳ ಮೂಲಕ ಸಮುದ್ರಕ್ಕೆ ಹಾಕಲಾಗುತ್ತದೆ. ಇವುಗಳು ಕ್ಷಿಪಣಿಗಳಿಗಿಂತ ಕಡಿಮೆ ವೆಚ್ಚದಾಯಕವಾಗಿದೆ ಮಾತ್ರವಲ್ಲ ಶತ್ರು ಹಡಗುಗಳಿಗೆ ಭಾರಿ ಹಾನಿ ಉಂಟುಮಾಡುತ್ತದೆ.

ಇರಾನ್‌ ದೇಶೀಯವಾಗಿ ನೇವಲ್‌ ಮೈನ್ಸ್‌ ತಯಾರಿಸುವ ಸಾಮರ್ಥ್ಯ ಹೊಂದಿದೆ. ಕೆಲವು ಸುಧಾರಿತ ವಿನ್ಯಾಸಗಳನ್ನು ರಷ್ಯಾ, ಚೀನಾ ಅಥವಾ ಉತ್ತರ ಕೊರಿಯಾದಲ್ಲಿ ಅಭಿವೃದ್ಧಿಪಡಿಸಿದ ವ್ಯವಸ್ಥೆಗಳಿಂದ ಪಡೆದಿದೆ ಎನ್ನಲಾಗುತ್ತಿದೆ.
ಅಮೆರಿಕ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಮ್ಯಾರಿಟೈಮ್ ಸೆಕ್ಯುರಿಟಿಯ ಪ್ರಕಾರ ಇರಾನ್ ಸುಮಾರು 2,000 ರಿಂದ 5,000 ನೇವಲ್‌ ಮೈನ್ಸ್‌ ಹೊಂದಿರುವ ಸಾಧ್ಯತೆಯಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!