ಸುದೀಪ್​ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ !

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ.

ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಇಂದು ಸ್ಯಾಂಡಲ್​ವುಡ್​ ಸ್ಟಾರ್​ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕಿಚ್ಚನ ಅಭಿಮಾನಿಗಳು ಮಧ್ಯರಾತ್ರಿಯೇ ಹಬ್ಬದ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳ ಶೂಟಿಂಗ್​ನಲ್ಲಿ ಬ್ಯುಸಿ ಇರೋ ಕಿಚ್ಚ ಸುದೀಪ್ ಅವರ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ಅನೌನ್ಸ್​ ಆಗಿದೆ.

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಒಂದಿನ ಮೊದಲೇ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಈವರೆಗೂ ಕೆ-47 ಎನ್ನುವ ಹೆಸರಿನಲ್ಲೇ ಶೂಟಿಂಗ್ ಮಾಡಿ ಪೂರ್ಣಗೊಳಿಸಲಾಗಿದೆ. ಕಿಚ್ಚನ ಹೊಸ ಸಿನಿಮಾ ರಿಲೀಸ್​ಗೂ ರೆಡಿಯಾಗಿದ್ದು ಡಿಸೆಂಬರ್​ನಲ್ಲಿ ಅಂದರೆ ಕ್ರಿಸ್​ಮಸ್​ಗೆ ಅಭಿಮಾನಿಗಳು ಈ ಸಿನಿಮಾವನ್ನು ಬಿಗ್​ ಸ್ಕ್ರೀನ್​ನಲ್ಲಿ ನೋಡಬಹುದು.

ಹೆಸರಿಡದ ಈ ಸಿನಿಮಾದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಂತೆ ಕಿಚ್ಚನ ಬರ್ತ್​ಡೇಗೂ ಒಂದಿನ ಮೊದಲೇ ಮೂವಿಯ ಟೈಟಲ್​ ಟೀಸರ್​ ರಿಲೀಸ್ ಮಾಡಲಾಗಿದೆ. ಮಾರ್ಕ್​ ಎನ್ನುವುದು ಮೂವಿಯ ಹೆಸರು ಆಗಿದೆ. ಸುದೀಪ್ ಕೂಡ ಮಾರ್ಕ್​ ಟೀಸರ್​ನಲ್ಲಿ ರಗಡ್​ ಅಂದರೆ ಫುಲ್ ರಗಡ್​ ಲುಕ್​ನಲ್ಲಿ ಕಾಣಿಸಿದ್ದಾರೆ. ಮಾರ್ಕ್​ ಸಿನಿಮಾದ ಬ್ಯಾಗ್ರೌಂಡ್ ಮ್ಯೂಸಿಕ್​ ಅಂತೂ ಮೈನವಿರೇಳಿಸುವಂತೆ ಇದೆ.

ನಿರ್ದೇಶಕ ವಿಜಯ್ ಕಾರ್ತಿಕೇಯ ಹಾಗೂ ಕಿಚ್ಚನ ಕಾಂಬೋದಲ್ಲಿ ಬರುತ್ತಿರುವ ಇದು 2ನೇ ಮೂವಿ ಆಗಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​​ನಲ್ಲಿ ಮ್ಯಾಕ್ಸ್​ ಸಿನಿಮಾ ತೆರೆ ಮೇಲೆ ಅಬ್ಬರಿಸಿತ್ತು. ಅಭಿಮಾನಿಗಳಿಗೂ ಸಖತ್ ಮನರಂಜನೆ ನೀಡಿತ್ತು. ಇದು ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯನ ಮೊದಲ ವಿಜಯ ಆಗಿತ್ತು. ಅದರಂತೆ ಮತ್ತೊಂದು ಜಯಭೇರಿ ಬಾರಿಸಲು ಇಬ್ಬರು ರೆಡಿಯಾಗಿದ್ದಾರೆ. ಹಿಂದಿ, ತೆಲುಗು, ತಮಿಳು ಹಾಗೂ ಕನ್ನಡದಲ್ಲಿ ತೆರೆಗೆ ಬರಲಿದೆ.

ಈ ಮಾರ್ಕ್​ ಸಿನಿಮಾಕ್ಕೆ ನಿರ್ದೇಶಕ ವಿಜಯ್ ಕಾರ್ತಿಕೇಯ ಡೈರೆಕ್ಷನ್ ಮಾಡಿದ್ದಾರೆ. ಅಜನೀಶ್ ಬಿ ಲೋಕನಾಥ್ ಮ್ಯೂಸಿಕ್ ಇದಕ್ಕಿದೆ. ಸತ್ಯಜ್ಯೋತಿ ಫಿಲಂ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ಗಳು ಜೊತೆಯಾಗಿ ಈ ಮೂವಿಗೆ ಬಂಡವಾಳ ಹಾಕಿದ್ದು ಲಾಭದ ನಿರೀಕ್ಷೆಯಲ್ಲಿವೆ. ಕಿಚ್ಚನ ಬರ್ತ್​ಡೇಗೆ ಸದ್ಯ ಟೈಟಲ್​ ಟೀಸರ್​ ಒಂದೇ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ಯಾರು ಯಾರು ಅಭಿನಯ ಮಾಡುತ್ತಿದ್ದಾರೆ, ಹೀರೋಯಿನ್ ಯಾರು, ಪೋಷಕ ಪಾತ್ರಗಳ ಹೆಸರು ರಿವೀಲ್ ಆಗಬೇಕಿದೆ ಅಷ್ಟೇ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಉತ್ತರ ಸಿಗುತ್ತದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!