ಸುದೀಪ್​ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ !

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ.

ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಇಂದು ಸ್ಯಾಂಡಲ್​ವುಡ್​ ಸ್ಟಾರ್​ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕಿಚ್ಚನ ಅಭಿಮಾನಿಗಳು ಮಧ್ಯರಾತ್ರಿಯೇ ಹಬ್ಬದ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳ ಶೂಟಿಂಗ್​ನಲ್ಲಿ ಬ್ಯುಸಿ ಇರೋ ಕಿಚ್ಚ ಸುದೀಪ್ ಅವರ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ಅನೌನ್ಸ್​ ಆಗಿದೆ.

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಒಂದಿನ ಮೊದಲೇ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಈವರೆಗೂ ಕೆ-47 ಎನ್ನುವ ಹೆಸರಿನಲ್ಲೇ ಶೂಟಿಂಗ್ ಮಾಡಿ ಪೂರ್ಣಗೊಳಿಸಲಾಗಿದೆ. ಕಿಚ್ಚನ ಹೊಸ ಸಿನಿಮಾ ರಿಲೀಸ್​ಗೂ ರೆಡಿಯಾಗಿದ್ದು ಡಿಸೆಂಬರ್​ನಲ್ಲಿ ಅಂದರೆ ಕ್ರಿಸ್​ಮಸ್​ಗೆ ಅಭಿಮಾನಿಗಳು ಈ ಸಿನಿಮಾವನ್ನು ಬಿಗ್​ ಸ್ಕ್ರೀನ್​ನಲ್ಲಿ ನೋಡಬಹುದು.

ಹೆಸರಿಡದ ಈ ಸಿನಿಮಾದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಂತೆ ಕಿಚ್ಚನ ಬರ್ತ್​ಡೇಗೂ ಒಂದಿನ ಮೊದಲೇ ಮೂವಿಯ ಟೈಟಲ್​ ಟೀಸರ್​ ರಿಲೀಸ್ ಮಾಡಲಾಗಿದೆ. ಮಾರ್ಕ್​ ಎನ್ನುವುದು ಮೂವಿಯ ಹೆಸರು ಆಗಿದೆ. ಸುದೀಪ್ ಕೂಡ ಮಾರ್ಕ್​ ಟೀಸರ್​ನಲ್ಲಿ ರಗಡ್​ ಅಂದರೆ ಫುಲ್ ರಗಡ್​ ಲುಕ್​ನಲ್ಲಿ ಕಾಣಿಸಿದ್ದಾರೆ. ಮಾರ್ಕ್​ ಸಿನಿಮಾದ ಬ್ಯಾಗ್ರೌಂಡ್ ಮ್ಯೂಸಿಕ್​ ಅಂತೂ ಮೈನವಿರೇಳಿಸುವಂತೆ ಇದೆ.

ನಿರ್ದೇಶಕ ವಿಜಯ್ ಕಾರ್ತಿಕೇಯ ಹಾಗೂ ಕಿಚ್ಚನ ಕಾಂಬೋದಲ್ಲಿ ಬರುತ್ತಿರುವ ಇದು 2ನೇ ಮೂವಿ ಆಗಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​​ನಲ್ಲಿ ಮ್ಯಾಕ್ಸ್​ ಸಿನಿಮಾ ತೆರೆ ಮೇಲೆ ಅಬ್ಬರಿಸಿತ್ತು. ಅಭಿಮಾನಿಗಳಿಗೂ ಸಖತ್ ಮನರಂಜನೆ ನೀಡಿತ್ತು. ಇದು ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯನ ಮೊದಲ ವಿಜಯ ಆಗಿತ್ತು. ಅದರಂತೆ ಮತ್ತೊಂದು ಜಯಭೇರಿ ಬಾರಿಸಲು ಇಬ್ಬರು ರೆಡಿಯಾಗಿದ್ದಾರೆ. ಹಿಂದಿ, ತೆಲುಗು, ತಮಿಳು ಹಾಗೂ ಕನ್ನಡದಲ್ಲಿ ತೆರೆಗೆ ಬರಲಿದೆ.

ಈ ಮಾರ್ಕ್​ ಸಿನಿಮಾಕ್ಕೆ ನಿರ್ದೇಶಕ ವಿಜಯ್ ಕಾರ್ತಿಕೇಯ ಡೈರೆಕ್ಷನ್ ಮಾಡಿದ್ದಾರೆ. ಅಜನೀಶ್ ಬಿ ಲೋಕನಾಥ್ ಮ್ಯೂಸಿಕ್ ಇದಕ್ಕಿದೆ. ಸತ್ಯಜ್ಯೋತಿ ಫಿಲಂ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ಗಳು ಜೊತೆಯಾಗಿ ಈ ಮೂವಿಗೆ ಬಂಡವಾಳ ಹಾಕಿದ್ದು ಲಾಭದ ನಿರೀಕ್ಷೆಯಲ್ಲಿವೆ. ಕಿಚ್ಚನ ಬರ್ತ್​ಡೇಗೆ ಸದ್ಯ ಟೈಟಲ್​ ಟೀಸರ್​ ಒಂದೇ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ಯಾರು ಯಾರು ಅಭಿನಯ ಮಾಡುತ್ತಿದ್ದಾರೆ, ಹೀರೋಯಿನ್ ಯಾರು, ಪೋಷಕ ಪಾತ್ರಗಳ ಹೆಸರು ರಿವೀಲ್ ಆಗಬೇಕಿದೆ ಅಷ್ಟೇ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಉತ್ತರ ಸಿಗುತ್ತದೆ.

Related Posts

ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು