ಹೊಸ ಬದುಕಿನ ಮೊದಲ ಹೆಜ್ಜೆಯಲ್ಲೇ ಮಾನವೀಯತೆಯ ಬೆಳಕು ಚೆಲ್ಲಿದ ನವಜೋಡಿ

ಮೈಸೂರು: ಮೈಸೂರಿನಲ್ಲಿ ನವ ಜೋಡಿಗಳಿಂದ ನೇತ್ರದಾನ ಮೈಸೂರಿನ ನಿವಾಸಿ ಚಂದನ್ ಮತ್ತು ಲಾವಣ್ಯ ಇಂದು ಸರಳ ಮದುವೆ ಮೂಲಕ ಹೊಸ ಬದುಕಿನ ಹೆಜ್ಜೆ ಇಟ್ಟಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ಈ ಜೋಡಿ, ಇಂದಿನ ದಿನ ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಚಾಲನೆ ನೀಡಿದರು.
ಮದುವೆ ಎಂದರೆ ಕೇವಲ ಸಂಬಂಧಿಕ–ಸ್ನೇಹಿತರಿಗೆ ಔತಣಕೂಟ, ಆನಂದ–ಆಡಂಬರವೆಂದುಕೊಳ್ಳುವ ಅನೇಕ ಯುವ ದಂಪತಿಗಳಿಗೆ, ಈ ಜೋಡಿ ನಿಜಕ್ಕೂ ಮಾದರಿಯಾಗಿದ್ದಾರೆ. ಮಾಂಗಲ್ಯ ಧಾರಣೆ ಬಳಿಕ ನವ ದಂಪತಿ ಇಬ್ಬರೂ ಸ್ವಇಚ್ಛೆಯಿಂದಲೇ ಮೈಸೂರಿನ ಅಗ್ರವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರ ಸಮ್ಮುಖದಲ್ಲಿ ದೇವಸ್ಥಾನದಲ್ಲೇ ನೇತ್ರದಾನ ಪ್ರಕ್ರಿಯೆಗೆ ಸಹಿ ಹಾಕಿದರು.ಮುಂದಿನ ಪೀಳಿಗೆಯ ನಾಲ್ಕು ಮಂದಿಗೆ, ನಾಲ್ಕು ಕುಟುಂಬಗಳಿಗೆ ಬೆಳಕಾಗುವ ಹಾದಿಯನ್ನು ಬರೆದು ಇವರು ಸಮಾಜದ ಮುಂದೆ ವಿಶಿಷ್ಟ ಮಾದರಿಯಾಗಿದ್ದಾರೆ.

ನವವರ ಚಂದನ್ ಅವರು:“ಇಂದಿನ ಯುವಕರಿಗೆ ಮದುವೆ ಎಂದರೆ ಹಳದಿ, ಸಂಗೀತ್, ಪ್ರೀ–ವೆಡಿಂಗ್ ಫೋಟೋ ಶೂಟ್ ಅಷ್ಟೆ. ನಾವು ಸಹ ಹಾಗೆ ಅಂದುಕೊಂಡಿದ್ದೆವು. ಆದರೆ ಮದುವೆಯ ಕ್ಷಣ ಸಮಾಜಕ್ಕೆ ಕೊಡುಗೆಯಾಗಿ ನೆನಪಾಗಲಿ ಎಂದುಕೊಂಡಾಗ ಡಾ. ರಾಜ್ ಕುಮಾರ್ ಅವರ ದಾರಿಯನ್ನು ಅನುಸರಿಸಿ, ‘ನೇತ್ರದಾನ ಮಹಾದಾನ’ ಎಂಬ ಮಾತಿನಂತೆ ನಾವು ಈ ಕಾರ್ಯಕ್ಕೆ ಮುಂದಾದೆವು. ಇದರಿಂದ ಮನಸ್ಸಿಗೆ ನಿಜವಾದ ಆತ್ಮತೃಪ್ತಿ ದೊರಕಿದೆ.”
ನಂತರ ಮಾತನಾಡಿದ ವಧು ಲಾವಣ್ಯ ಅವರು: “ಹತ್ತು ವರ್ಷಗಳ ಪ್ರೀತಿಯನ್ನು ಕುಟುಂಬದವರ ಒಪ್ಪಿಗೆಯೊಂದಿಗೆ ಇಂದು ಮದುವೆಯಾಗಿ ಸಾರ್ಥಕತೆ ಕಂಡಿದ್ದೇವೆ. ಈ ಕ್ಷಣವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ನೇತ್ರದಾನಕ್ಕೆ ಸಹಿ ಹಾಕಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಂದಿ ಇಂತಹ ಕಾರ್ಯಕ್ಕೆ ಮುಂದೆ ಬರಲಿ ಎಂದು ಹಾರೈಸುತ್ತೇನೆ.”ತಮ್ಮ ಭಾವನೆ ಹಂಚಿಕೊಂಡುರು.

ಒಟ್ಟಾರೆಯಾಗಿ ಮದುವೆಯ ಸಂಭ್ರಮವನ್ನು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣಗೊಳಿಸಿದ ನವ ದಂಪತಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!