ಹೊಸ ಬದುಕಿನ ಮೊದಲ ಹೆಜ್ಜೆಯಲ್ಲೇ ಮಾನವೀಯತೆಯ ಬೆಳಕು ಚೆಲ್ಲಿದ ನವಜೋಡಿ

ಮೈಸೂರು: ಮೈಸೂರಿನಲ್ಲಿ ನವ ಜೋಡಿಗಳಿಂದ ನೇತ್ರದಾನ ಮೈಸೂರಿನ ನಿವಾಸಿ ಚಂದನ್ ಮತ್ತು ಲಾವಣ್ಯ ಇಂದು ಸರಳ ಮದುವೆ ಮೂಲಕ ಹೊಸ ಬದುಕಿನ ಹೆಜ್ಜೆ ಇಟ್ಟಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ಈ ಜೋಡಿ, ಇಂದಿನ ದಿನ ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಚಾಲನೆ ನೀಡಿದರು.
ಮದುವೆ ಎಂದರೆ ಕೇವಲ ಸಂಬಂಧಿಕ–ಸ್ನೇಹಿತರಿಗೆ ಔತಣಕೂಟ, ಆನಂದ–ಆಡಂಬರವೆಂದುಕೊಳ್ಳುವ ಅನೇಕ ಯುವ ದಂಪತಿಗಳಿಗೆ, ಈ ಜೋಡಿ ನಿಜಕ್ಕೂ ಮಾದರಿಯಾಗಿದ್ದಾರೆ. ಮಾಂಗಲ್ಯ ಧಾರಣೆ ಬಳಿಕ ನವ ದಂಪತಿ ಇಬ್ಬರೂ ಸ್ವಇಚ್ಛೆಯಿಂದಲೇ ಮೈಸೂರಿನ ಅಗ್ರವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರ ಸಮ್ಮುಖದಲ್ಲಿ ದೇವಸ್ಥಾನದಲ್ಲೇ ನೇತ್ರದಾನ ಪ್ರಕ್ರಿಯೆಗೆ ಸಹಿ ಹಾಕಿದರು.ಮುಂದಿನ ಪೀಳಿಗೆಯ ನಾಲ್ಕು ಮಂದಿಗೆ, ನಾಲ್ಕು ಕುಟುಂಬಗಳಿಗೆ ಬೆಳಕಾಗುವ ಹಾದಿಯನ್ನು ಬರೆದು ಇವರು ಸಮಾಜದ ಮುಂದೆ ವಿಶಿಷ್ಟ ಮಾದರಿಯಾಗಿದ್ದಾರೆ.

ನವವರ ಚಂದನ್ ಅವರು:“ಇಂದಿನ ಯುವಕರಿಗೆ ಮದುವೆ ಎಂದರೆ ಹಳದಿ, ಸಂಗೀತ್, ಪ್ರೀ–ವೆಡಿಂಗ್ ಫೋಟೋ ಶೂಟ್ ಅಷ್ಟೆ. ನಾವು ಸಹ ಹಾಗೆ ಅಂದುಕೊಂಡಿದ್ದೆವು. ಆದರೆ ಮದುವೆಯ ಕ್ಷಣ ಸಮಾಜಕ್ಕೆ ಕೊಡುಗೆಯಾಗಿ ನೆನಪಾಗಲಿ ಎಂದುಕೊಂಡಾಗ ಡಾ. ರಾಜ್ ಕುಮಾರ್ ಅವರ ದಾರಿಯನ್ನು ಅನುಸರಿಸಿ, ‘ನೇತ್ರದಾನ ಮಹಾದಾನ’ ಎಂಬ ಮಾತಿನಂತೆ ನಾವು ಈ ಕಾರ್ಯಕ್ಕೆ ಮುಂದಾದೆವು. ಇದರಿಂದ ಮನಸ್ಸಿಗೆ ನಿಜವಾದ ಆತ್ಮತೃಪ್ತಿ ದೊರಕಿದೆ.”
ನಂತರ ಮಾತನಾಡಿದ ವಧು ಲಾವಣ್ಯ ಅವರು: “ಹತ್ತು ವರ್ಷಗಳ ಪ್ರೀತಿಯನ್ನು ಕುಟುಂಬದವರ ಒಪ್ಪಿಗೆಯೊಂದಿಗೆ ಇಂದು ಮದುವೆಯಾಗಿ ಸಾರ್ಥಕತೆ ಕಂಡಿದ್ದೇವೆ. ಈ ಕ್ಷಣವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ನೇತ್ರದಾನಕ್ಕೆ ಸಹಿ ಹಾಕಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಂದಿ ಇಂತಹ ಕಾರ್ಯಕ್ಕೆ ಮುಂದೆ ಬರಲಿ ಎಂದು ಹಾರೈಸುತ್ತೇನೆ.”ತಮ್ಮ ಭಾವನೆ ಹಂಚಿಕೊಂಡುರು.

ಒಟ್ಟಾರೆಯಾಗಿ ಮದುವೆಯ ಸಂಭ್ರಮವನ್ನು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣಗೊಳಿಸಿದ ನವ ದಂಪತಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!