ಹೊಸ ಬದುಕಿನ ಮೊದಲ ಹೆಜ್ಜೆಯಲ್ಲೇ ಮಾನವೀಯತೆಯ ಬೆಳಕು ಚೆಲ್ಲಿದ ನವಜೋಡಿ

ಮೈಸೂರು: ಮೈಸೂರಿನಲ್ಲಿ ನವ ಜೋಡಿಗಳಿಂದ ನೇತ್ರದಾನ ಮೈಸೂರಿನ ನಿವಾಸಿ ಚಂದನ್ ಮತ್ತು ಲಾವಣ್ಯ ಇಂದು ಸರಳ ಮದುವೆ ಮೂಲಕ ಹೊಸ ಬದುಕಿನ ಹೆಜ್ಜೆ ಇಟ್ಟಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ಈ ಜೋಡಿ, ಇಂದಿನ ದಿನ ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಚಾಲನೆ ನೀಡಿದರು.
ಮದುವೆ ಎಂದರೆ ಕೇವಲ ಸಂಬಂಧಿಕ–ಸ್ನೇಹಿತರಿಗೆ ಔತಣಕೂಟ, ಆನಂದ–ಆಡಂಬರವೆಂದುಕೊಳ್ಳುವ ಅನೇಕ ಯುವ ದಂಪತಿಗಳಿಗೆ, ಈ ಜೋಡಿ ನಿಜಕ್ಕೂ ಮಾದರಿಯಾಗಿದ್ದಾರೆ. ಮಾಂಗಲ್ಯ ಧಾರಣೆ ಬಳಿಕ ನವ ದಂಪತಿ ಇಬ್ಬರೂ ಸ್ವಇಚ್ಛೆಯಿಂದಲೇ ಮೈಸೂರಿನ ಅಗ್ರವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರ ಸಮ್ಮುಖದಲ್ಲಿ ದೇವಸ್ಥಾನದಲ್ಲೇ ನೇತ್ರದಾನ ಪ್ರಕ್ರಿಯೆಗೆ ಸಹಿ ಹಾಕಿದರು.ಮುಂದಿನ ಪೀಳಿಗೆಯ ನಾಲ್ಕು ಮಂದಿಗೆ, ನಾಲ್ಕು ಕುಟುಂಬಗಳಿಗೆ ಬೆಳಕಾಗುವ ಹಾದಿಯನ್ನು ಬರೆದು ಇವರು ಸಮಾಜದ ಮುಂದೆ ವಿಶಿಷ್ಟ ಮಾದರಿಯಾಗಿದ್ದಾರೆ.

ನವವರ ಚಂದನ್ ಅವರು:“ಇಂದಿನ ಯುವಕರಿಗೆ ಮದುವೆ ಎಂದರೆ ಹಳದಿ, ಸಂಗೀತ್, ಪ್ರೀ–ವೆಡಿಂಗ್ ಫೋಟೋ ಶೂಟ್ ಅಷ್ಟೆ. ನಾವು ಸಹ ಹಾಗೆ ಅಂದುಕೊಂಡಿದ್ದೆವು. ಆದರೆ ಮದುವೆಯ ಕ್ಷಣ ಸಮಾಜಕ್ಕೆ ಕೊಡುಗೆಯಾಗಿ ನೆನಪಾಗಲಿ ಎಂದುಕೊಂಡಾಗ ಡಾ. ರಾಜ್ ಕುಮಾರ್ ಅವರ ದಾರಿಯನ್ನು ಅನುಸರಿಸಿ, ‘ನೇತ್ರದಾನ ಮಹಾದಾನ’ ಎಂಬ ಮಾತಿನಂತೆ ನಾವು ಈ ಕಾರ್ಯಕ್ಕೆ ಮುಂದಾದೆವು. ಇದರಿಂದ ಮನಸ್ಸಿಗೆ ನಿಜವಾದ ಆತ್ಮತೃಪ್ತಿ ದೊರಕಿದೆ.”
ನಂತರ ಮಾತನಾಡಿದ ವಧು ಲಾವಣ್ಯ ಅವರು: “ಹತ್ತು ವರ್ಷಗಳ ಪ್ರೀತಿಯನ್ನು ಕುಟುಂಬದವರ ಒಪ್ಪಿಗೆಯೊಂದಿಗೆ ಇಂದು ಮದುವೆಯಾಗಿ ಸಾರ್ಥಕತೆ ಕಂಡಿದ್ದೇವೆ. ಈ ಕ್ಷಣವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ನೇತ್ರದಾನಕ್ಕೆ ಸಹಿ ಹಾಕಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಂದಿ ಇಂತಹ ಕಾರ್ಯಕ್ಕೆ ಮುಂದೆ ಬರಲಿ ಎಂದು ಹಾರೈಸುತ್ತೇನೆ.”ತಮ್ಮ ಭಾವನೆ ಹಂಚಿಕೊಂಡುರು.

ಒಟ್ಟಾರೆಯಾಗಿ ಮದುವೆಯ ಸಂಭ್ರಮವನ್ನು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣಗೊಳಿಸಿದ ನವ ದಂಪತಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!