ಹೊಸ ಬದುಕಿನ ಮೊದಲ ಹೆಜ್ಜೆಯಲ್ಲೇ ಮಾನವೀಯತೆಯ ಬೆಳಕು ಚೆಲ್ಲಿದ ನವಜೋಡಿ

ಮೈಸೂರು: ಮೈಸೂರಿನಲ್ಲಿ ನವ ಜೋಡಿಗಳಿಂದ ನೇತ್ರದಾನ ಮೈಸೂರಿನ ನಿವಾಸಿ ಚಂದನ್ ಮತ್ತು ಲಾವಣ್ಯ ಇಂದು ಸರಳ ಮದುವೆ ಮೂಲಕ ಹೊಸ ಬದುಕಿನ ಹೆಜ್ಜೆ ಇಟ್ಟಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ಈ ಜೋಡಿ, ಇಂದಿನ ದಿನ ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಚಾಲನೆ ನೀಡಿದರು.
ಮದುವೆ ಎಂದರೆ ಕೇವಲ ಸಂಬಂಧಿಕ–ಸ್ನೇಹಿತರಿಗೆ ಔತಣಕೂಟ, ಆನಂದ–ಆಡಂಬರವೆಂದುಕೊಳ್ಳುವ ಅನೇಕ ಯುವ ದಂಪತಿಗಳಿಗೆ, ಈ ಜೋಡಿ ನಿಜಕ್ಕೂ ಮಾದರಿಯಾಗಿದ್ದಾರೆ. ಮಾಂಗಲ್ಯ ಧಾರಣೆ ಬಳಿಕ ನವ ದಂಪತಿ ಇಬ್ಬರೂ ಸ್ವಇಚ್ಛೆಯಿಂದಲೇ ಮೈಸೂರಿನ ಅಗ್ರವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರ ಸಮ್ಮುಖದಲ್ಲಿ ದೇವಸ್ಥಾನದಲ್ಲೇ ನೇತ್ರದಾನ ಪ್ರಕ್ರಿಯೆಗೆ ಸಹಿ ಹಾಕಿದರು.ಮುಂದಿನ ಪೀಳಿಗೆಯ ನಾಲ್ಕು ಮಂದಿಗೆ, ನಾಲ್ಕು ಕುಟುಂಬಗಳಿಗೆ ಬೆಳಕಾಗುವ ಹಾದಿಯನ್ನು ಬರೆದು ಇವರು ಸಮಾಜದ ಮುಂದೆ ವಿಶಿಷ್ಟ ಮಾದರಿಯಾಗಿದ್ದಾರೆ.

ನವವರ ಚಂದನ್ ಅವರು:“ಇಂದಿನ ಯುವಕರಿಗೆ ಮದುವೆ ಎಂದರೆ ಹಳದಿ, ಸಂಗೀತ್, ಪ್ರೀ–ವೆಡಿಂಗ್ ಫೋಟೋ ಶೂಟ್ ಅಷ್ಟೆ. ನಾವು ಸಹ ಹಾಗೆ ಅಂದುಕೊಂಡಿದ್ದೆವು. ಆದರೆ ಮದುವೆಯ ಕ್ಷಣ ಸಮಾಜಕ್ಕೆ ಕೊಡುಗೆಯಾಗಿ ನೆನಪಾಗಲಿ ಎಂದುಕೊಂಡಾಗ ಡಾ. ರಾಜ್ ಕುಮಾರ್ ಅವರ ದಾರಿಯನ್ನು ಅನುಸರಿಸಿ, ‘ನೇತ್ರದಾನ ಮಹಾದಾನ’ ಎಂಬ ಮಾತಿನಂತೆ ನಾವು ಈ ಕಾರ್ಯಕ್ಕೆ ಮುಂದಾದೆವು. ಇದರಿಂದ ಮನಸ್ಸಿಗೆ ನಿಜವಾದ ಆತ್ಮತೃಪ್ತಿ ದೊರಕಿದೆ.”
ನಂತರ ಮಾತನಾಡಿದ ವಧು ಲಾವಣ್ಯ ಅವರು: “ಹತ್ತು ವರ್ಷಗಳ ಪ್ರೀತಿಯನ್ನು ಕುಟುಂಬದವರ ಒಪ್ಪಿಗೆಯೊಂದಿಗೆ ಇಂದು ಮದುವೆಯಾಗಿ ಸಾರ್ಥಕತೆ ಕಂಡಿದ್ದೇವೆ. ಈ ಕ್ಷಣವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ನೇತ್ರದಾನಕ್ಕೆ ಸಹಿ ಹಾಕಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಂದಿ ಇಂತಹ ಕಾರ್ಯಕ್ಕೆ ಮುಂದೆ ಬರಲಿ ಎಂದು ಹಾರೈಸುತ್ತೇನೆ.”ತಮ್ಮ ಭಾವನೆ ಹಂಚಿಕೊಂಡುರು.

ಒಟ್ಟಾರೆಯಾಗಿ ಮದುವೆಯ ಸಂಭ್ರಮವನ್ನು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣಗೊಳಿಸಿದ ನವ ದಂಪತಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!