ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ.

ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್​ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!