ಹೊಸ ಟ್ಯಾಟೋ ಮೂಲಕ ನಿತೀಶ್ ರೆಡ್ಡಿ ಸಂದೇಶ..!

ಟೀಮ್​ ಇಂಡಿಯನ್​ ಕ್ರಿಕೆಟರ್​​ಗಳಿಗೂ ಟ್ಯಾಟೂಗಳಿಗೂ ಒಂದು ರೀತಿ ವಿಶೇಷ ನಂಟಿದೆ. ವಿರಾಟ್​ ಕೊಹ್ಲಿ, ಕೆ.ಎಲ್. ರಾಹುಲ್​, ಹಾರ್ದಿಕ್​ ಪಾಂಡ್ಯ, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್​, ರಿಂಕು ಸಿಂಗ್​, ಹೀಗೆ ಟ್ಯಾಟೂ ಪ್ರಿಯರ ದಂಡೇ ಇದೆ. ಟ್ಯಾಟೊ ಕ್ರೇಜ್​ ಹೊಂದಿರುವ ಕ್ರಿಕೆಟಿಗರು, ತಮ್ಮ ಕೈಗಳ ಮೇಲೆ, ದೇಹದ ಮೇಲೆ ವಿಶೇಷವಾದ ಹಚ್ಚೆ ಹಾಕಿಸಿಕೊಂಡಿದ್ದಿದೆ. ಈ ಪೈಕಿ ನಿತಿಶ್ ಕುಮಾರ್ ರೆಡ್ಡಿಯೂ ಒಬ್ಬರು.

ನಿತೀಶ್ ರೆಡ್ಡಿಗೆ ಟ್ಯಾಟೋ ಕ್ರೇಜ್​ ಇದೆ ಅನ್ನೋದು ಓಪನ್ ಸಿಕ್ರೇಟ್. ಆದ್ರೆ, ಇಂಜುರಿಯಿಂದ ಚೇರಿಸಿಕೊಳ್ಳುತ್ತಿರುವ ನಿತೀಶ್​ ರೆಡ್ಡಿ, ಎರಡು ಹೊಸ ಟ್ಯಾಟೋಗಳನ್ನು ಹಾಕಿಸಿಕೊಂಡಿದ್ದಾರೆ. ಪಕ್ಕೆಲುಬಿನ ಮೇಲೆ ಫಿನಿಕ್ಸ್​ ಹಕ್ಕಿಯ ಟ್ಯಾಟೋ ಹಾಕಿಸಿಕೊಂಡಿರುವ ನಿತೀಶ್ ರೆಡ್ಡಿ, ಬೆನ್ನ ಹಿಂದೆ ಕತ್ತಿಯ ಜೊತೆಗೆ ಹಕ್ಕಿಯ ರೆಕ್ಕೆಯ ಟ್ಯಾಟೋ ಹಾಕಿಸಿಕೊಂಡಿದ್ದಾರೆ. ಇದು ಕ್ರೇಜ್​ಗಾಗಿ ಮಾತ್ರವೇ ಹಾಕಿಸಿಕೊಂಡ ಟ್ಯಾಟೂಗಳು ಇವಲ್ಲ. ಟ್ಯಾಟೋಗಳ ಹಿಂದೆ ಒಂದು ಸಂದೇಶ ಇದೆ.

ಫಿನಿಕ್ಸ್​, ಕತ್ತಿ & ರೆಕ್ಕೆ ಟ್ಯಾಟೋ ಹಿಂದಿದೆ ವಿಶೇಷ ಅರ್ಥ..!

ಫಿನಿಕ್ಸ್​… ಇದು ಜನಪ್ರಿಯ ಪೌರಾಣಿಕ ಹಕ್ಕಿ. ಸತ್ತ ನಂತರವೂ ತನ್ನ ಬೂದಿಯಿಂದಲೇ ಮತ್ತೆ ಹುಟ್ಟಿ ಬರುವುದಕ್ಕೆ ಈ ಹಕ್ಕಿ ಹೆಸರುವಾಸಿ. ಸವಾಲುಗಳನ್ನ ಮೆಟ್ಟಿನಿಲ್ಲುವ ಸಾಮರ್ಥ್ಯ, ಹೋರಾಟದ ಪ್ರತಿರೂಪವೇ ಈ ಹಕ್ಕಿ ಅನ್ನೋದ್ರಲ್ಲಿ ಡೌಟೇ ಇಲ್ಲ. ಸುರ್ಯೋದಯದ ಸಂಕೇತವೂ ಆಗಿದೆ. ಸದ್ಯ ಇಂಜುರಿಯಾಗಿರುವ ನಿತಿಶ್, ಫಿನಿಕ್ಸ್​ ಟ್ಯಾಟೋ ಮೂಲಕ ನೀಡಿರುವ ಸಂದೇಶವೇ ಟೀಮ್ ಇಂಡಿಯಾ ಕಮ್​ಬ್ಯಾಕ್​.

ನಿತೀಶ್ ರೆಡ್ಡಿ ಮೈ ಮೇಲೆ ಮತ್ತೆರೆಡು ಟ್ಯಾಟೋಗಳಿವೆ. ಈ ಪೈಕಿ ಒಂದು ಬಲಗೈ ತೋಳಿನ ಮೇಲ್ಭಾಗದಲ್ಲಿ ಘರ್ಜಿಸ್ತಿರುವ ಹುಲಿ ಇದೆ. ಕೆಳ ಭಾಗದಲ್ಲಿ ಯೋಧನ ಚಿತ್ರವಿದೆ. ಅಷ್ಟೇ ಅಲ್ಲ.! ಈ ಹಚ್ಚೆಯ ಪ್ರಾಮುಖ್ಯತೆ, ಈ ಟ್ಯಾಟೋಗಳು ಪ್ರಭಾವ ಬೀರಿದ ಅಂಶಗಳ ಬಗ್ಗೆ ಸ್ವತಃ ನಿತಿಶ್ ರೆಡ್ಡಿಯೇ ಉಲ್ಲೇಖಿಸಿದ್ದಿದೆ.

 

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!