ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

ಸಿಲಿಕಾನ್‌ ಸಿಟಿಯಲ್ಲಿ ಕೇರಳ ಪೊಲೀಸರು (Kerala Police) ಭರ್ಜರಿ ಬೇಟಿ ನಡೆಸಿ, ಕುಖ್ಯಾತ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು (Ganja Peddler) ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ. ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಮೈಲಸಂದ್ರದಲ್ಲಿ ದಾಳಿ ನಡೆಸಿ, 1 ಕೋಟಿ ಮೌಲ್ಯದ 2 ಕೆಜಿ ಎಂಡಿಎಂಎ ಡ್ರಗ್ಸ್ ಸೀಜ್ ಮಾಡಲಾಗಿದೆ.

ಕೇರಳ ಮಾದಕವಸ್ತು ವಿರೋಧಿ ವಿಶೇಷ ಕಾರ್ಯಪಡೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತು. ಸೆರೆಲ್ಯಾಕ್ ಪಾಕೆಟ್‌ಗಳಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡಲಾಗುತ್ತಿತ್ತು. ರಮೇಶ್ ರೆಡ್ಡಿ ಬಡಾವಣೆಯ ಮನೆಯೊಂದರಲ್ಲಿ ಪೊಲೀಸರು ಸೀಜ್‌ ಮಾಡಿದ್ದಾರೆ. ಸತ್ಯಜಿತ್‌ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು.

ದಾಳಿ ವೇಳೆ 2 ಕೆಜಿ ತೂಕದ ನಾಲ್ಕು ಪ್ಯಾಕೆಟ್‌, 15 ಕ್ಕೂ ಅಧಿಕ ಖಾಲಿಯಾದ ಸೆರೆಲ್ಯಾಕ್ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಸ್ವಿಗ್ಗಿ ಜೊಮ್ಯಾಟೊ ಡೆಲಿವರಿ ಬಾಯ್ ರೀತಿ ಎಂಡಿಎಂಎ ಸರಬರಾಜು ಮಾಡಲಾಗುತ್ತಿತ್ತು. ಕೇರಳದ ಮಲ್ಲಪುರಂನಲ್ಲಿ ಆರೋಪಿ ಧೀರೇಶ್ ಸಹಚರರು ಸಿಕ್ಕಿಬಿದ್ದಿದ್ದರು. ವಾರದ ಹಿಂದೆ 1 ಕೆಜಿ ಎಂಡಿಎಂಎ ಸಹಿತ 8 ಮಂದಿ ಬಂಧಿಸಲಾಗಿತ್ತು. ವಿಚಾರಣೆ ವೇಳೆ ಕಿಂಗ್‌ಪಿನ್ ಧೀರೇಶ್ ಬಗ್ಗೆ ಮಾಹಿತಿ ಸಿಕ್ಕಿತ್ತು.

ಆರೋಪಿ ಧೀರೇಶ್ ತಂಗಿ ಪತಿ ನೈಜೀರಿಯಾ ಮೂಲದವನು. ಆತನ ಮೂಲಕ ಎಂಡಿಎಂಎ ಡ್ರಗ್ಸ್ ಅಸ್ಸಾಂಗೆ ರವಾನೆಯಾಗುತ್ತಿತ್ತು. ಅಸ್ಸಾಂನಲ್ಲಿರುವ ತಂಗಿ ಮೂಲಕ ಕೇರಳ, ಕರ್ನಾಟಕಕ್ಕೆ ಸಾಗಣೆ ಮಾಡಲಾಗುತ್ತಿತ್ತು. ಪ್ರಕರಣ ಸಂಬಂಧ ಕೇರಳ‌ ಪೊಲೀಸರಿಂದ 9 ಮಂದಿಯನ್ನು ಬಂಧಿಸಲಾಗಿದೆ. ಒಟ್ಟು ಮೂರು ಕೆಜಿಯಷ್ಟು ಎಂಡಿಎಂಎ ಸೀಜ್ ಮಾಡಲಾಗಿದೆ.

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!