ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

ಸಿಲಿಕಾನ್‌ ಸಿಟಿಯಲ್ಲಿ ಕೇರಳ ಪೊಲೀಸರು (Kerala Police) ಭರ್ಜರಿ ಬೇಟಿ ನಡೆಸಿ, ಕುಖ್ಯಾತ ಅಂತರರಾಜ್ಯ ಗಾಂಜಾ ಪೆಡ್ಲರ್‌ನನ್ನು (Ganja Peddler) ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಧೀರೇಶ್ ಕುಟುಮ್ (27) ಬಂಧಿತ ಆರೋಪಿ. ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಮೈಲಸಂದ್ರದಲ್ಲಿ ದಾಳಿ ನಡೆಸಿ, 1 ಕೋಟಿ ಮೌಲ್ಯದ 2 ಕೆಜಿ ಎಂಡಿಎಂಎ ಡ್ರಗ್ಸ್ ಸೀಜ್ ಮಾಡಲಾಗಿದೆ.

ಕೇರಳ ಮಾದಕವಸ್ತು ವಿರೋಧಿ ವಿಶೇಷ ಕಾರ್ಯಪಡೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತು. ಸೆರೆಲ್ಯಾಕ್ ಪಾಕೆಟ್‌ಗಳಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡಲಾಗುತ್ತಿತ್ತು. ರಮೇಶ್ ರೆಡ್ಡಿ ಬಡಾವಣೆಯ ಮನೆಯೊಂದರಲ್ಲಿ ಪೊಲೀಸರು ಸೀಜ್‌ ಮಾಡಿದ್ದಾರೆ. ಸತ್ಯಜಿತ್‌ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು.

ದಾಳಿ ವೇಳೆ 2 ಕೆಜಿ ತೂಕದ ನಾಲ್ಕು ಪ್ಯಾಕೆಟ್‌, 15 ಕ್ಕೂ ಅಧಿಕ ಖಾಲಿಯಾದ ಸೆರೆಲ್ಯಾಕ್ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಸ್ವಿಗ್ಗಿ ಜೊಮ್ಯಾಟೊ ಡೆಲಿವರಿ ಬಾಯ್ ರೀತಿ ಎಂಡಿಎಂಎ ಸರಬರಾಜು ಮಾಡಲಾಗುತ್ತಿತ್ತು. ಕೇರಳದ ಮಲ್ಲಪುರಂನಲ್ಲಿ ಆರೋಪಿ ಧೀರೇಶ್ ಸಹಚರರು ಸಿಕ್ಕಿಬಿದ್ದಿದ್ದರು. ವಾರದ ಹಿಂದೆ 1 ಕೆಜಿ ಎಂಡಿಎಂಎ ಸಹಿತ 8 ಮಂದಿ ಬಂಧಿಸಲಾಗಿತ್ತು. ವಿಚಾರಣೆ ವೇಳೆ ಕಿಂಗ್‌ಪಿನ್ ಧೀರೇಶ್ ಬಗ್ಗೆ ಮಾಹಿತಿ ಸಿಕ್ಕಿತ್ತು.

ಆರೋಪಿ ಧೀರೇಶ್ ತಂಗಿ ಪತಿ ನೈಜೀರಿಯಾ ಮೂಲದವನು. ಆತನ ಮೂಲಕ ಎಂಡಿಎಂಎ ಡ್ರಗ್ಸ್ ಅಸ್ಸಾಂಗೆ ರವಾನೆಯಾಗುತ್ತಿತ್ತು. ಅಸ್ಸಾಂನಲ್ಲಿರುವ ತಂಗಿ ಮೂಲಕ ಕೇರಳ, ಕರ್ನಾಟಕಕ್ಕೆ ಸಾಗಣೆ ಮಾಡಲಾಗುತ್ತಿತ್ತು. ಪ್ರಕರಣ ಸಂಬಂಧ ಕೇರಳ‌ ಪೊಲೀಸರಿಂದ 9 ಮಂದಿಯನ್ನು ಬಂಧಿಸಲಾಗಿದೆ. ಒಟ್ಟು ಮೂರು ಕೆಜಿಯಷ್ಟು ಎಂಡಿಎಂಎ ಸೀಜ್ ಮಾಡಲಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!