IPLಗೆ ಗುಡ್​ಬೈ ಹೇಳಿದ ಆಫ್​ ಸ್ಪಿನ್ನರ್ ಆರ್​.ಅಶ್ವಿನ್

ಟೀಮ್ ಇಂಡಿಯಾದ ಮಾಜಿ ಆಫ್​ ಸ್ಪಿನ್ನರ್ ಹಾಗೂ ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಅವರು 2026ರ ಐಪಿಎಲ್​ಗೂ ಮೊದಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆರ್.ಅಶ್ವಿನ್ ಅವರು ಇತ್ತೀಚೆಗಷ್ಟೇ ಭಾರತದ ಟೆಸ್ಟ್​ ಕ್ರಿಕೆಟ್​ಗೆ ಗುಡ್​ಬೈ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಐಪಿಎಲ್​ಗೂ ನಿವೃತ್ತಿ ಘೋಷಿಸಿದ್ದಾರೆ.

ಆರ್.ಅಶ್ವಿನ್ ಅವರು ಲಂಡನ್​ನ ನ್ಯೂಲ್ಯಾಂಡ್ಸ್​ನಲ್ಲಿ ನಡೆದ 2009ರ ಐಪಿಎಲ್​ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರವಾಗಿ ಡೆಬ್ಯು ಮಾಡಿದ್ದರು. ಆದರೆ ಈ ಪಂದ್ಯದಲ್ಲಿ ಎದುರಾಳಿ ಮುಂಬೈ ಇಂಡಿಯನ್ಸ್​ ಗೆಲುವು ಸಾಧಿಸಿತ್ತು. ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಸ್ಪಿನ್ನರ್ ಎಂದು ಖ್ಯಾತಿ ಪಡೆದಿದ್ದರು. ಇವರು ಆಡಿದ ಐಪಿಎಲ್​ ಟೂರ್ನಿಗಳಲ್ಲಿ ಇದುವರೆಗೆ 187 ವಿಕೆಟ್​ಗಳನ್ನು ಉರುಳಿಸಿದ್ದಾರೆ. 833 ರನ್​ ಗಳಿಸಿದ್ದು ಇದರಲ್ಲಿ ಒಂದು ಅರ್ಧಶತಕ ಸೇರಿದೆ. ಐಪಿಎಲ್​ನಲ್ಲಿ ಅತಿ ಹೆಚ್ಚು ವಿಕೆಟ್​ ಪಡೆದವರ ಪೈಕಿ ಆರ್ ಅಶ್ವಿನ್ ಅವರು ಐದನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

 

ಈವರೆಗೆ ಆರ್ ಅಶ್ವಿನ್ ಅವರು 16 ಸೀಸನ್​ಗಳಲ್ಲಿ 5 ತಂಡಗಳ ಪರ ಆಡಿದ್ದರು. 2025ರ ಮೆಗಾ ಆಕ್ಷನ್​ನಲ್ಲಿ ಅಶ್ವಿನ್ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಭಾಗವಾಗಿದ್ದರು. ಆದರೆ ಕಳೆದ ಋತುವಿನಲ್ಲಿ ಪ್ರದರ್ಶನ ಕಳಪೆಯಾಗಿತ್ತು. ಸಿಎಸ್​ಕೆ ಪರವಾಗಿ ಒಟ್ಟು 7 ಸೀಸನ್​ಗಳನ್ನು ಆಡಿದ್ದ ಅಶ್ವಿನ್ ಉಳಿದವುಗಳನ್ನು ಬೇರೆ ತಂಡಗಳ ಪರವಾಗಿ ಬೌಲಿಂಗ್ ಮಾಡಿದ್ದರು.

ಆರ್ ಅಶ್ವಿನ್ ಆಡಿರುವ ಐಪಿಎಲ್ ತಂಡಗಳು ಎಂದರೆ, ಚೆನ್ನೈ ಸೂಪರ್ ಕಿಂಗ್ಸ್, ರೈಸಿಂಗ್ ಪುಣೆ ವಾರಿಯರ್ಸ್, ಕಿಂಗ್ಸ್​ ಇಲೆವೆನ್ ಪಂಜಾಬ್, ಡೆಲ್ಲಿಕ್ಯಾಪಿಟಲ್ಸ್​ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡದ ಪರ ಆಡಿದ್ದರು. ಇವಷ್ಟೇ ಅಲ್ಲದೇ ತಮಿಳುನಾಡು ತಂಡ, ದಿಂಡಿಗಲ್ ಡ್ರ್ಯಾಗನ್ಸ್, ವೋರ್ಸೆಸ್ಟರ್‌ಶೈರ್ (Worcestershire), ನಾಟಿಂಗ್ಹ್ಯಾಮ್ಶೈರ್ (Nottinghamshire) ಹಾಗೂ ಸರ್ರೆ (Surrey) ತಂಡಗಳಲ್ಲಿಯು ಆಡಿದ್ದಾರೆ.

Related Posts

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

  2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!