IPLಗೆ ಗುಡ್​ಬೈ ಹೇಳಿದ ಆಫ್​ ಸ್ಪಿನ್ನರ್ ಆರ್​.ಅಶ್ವಿನ್

ಟೀಮ್ ಇಂಡಿಯಾದ ಮಾಜಿ ಆಫ್​ ಸ್ಪಿನ್ನರ್ ಹಾಗೂ ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಅವರು 2026ರ ಐಪಿಎಲ್​ಗೂ ಮೊದಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆರ್.ಅಶ್ವಿನ್ ಅವರು ಇತ್ತೀಚೆಗಷ್ಟೇ ಭಾರತದ ಟೆಸ್ಟ್​ ಕ್ರಿಕೆಟ್​ಗೆ ಗುಡ್​ಬೈ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಐಪಿಎಲ್​ಗೂ ನಿವೃತ್ತಿ ಘೋಷಿಸಿದ್ದಾರೆ.

ಆರ್.ಅಶ್ವಿನ್ ಅವರು ಲಂಡನ್​ನ ನ್ಯೂಲ್ಯಾಂಡ್ಸ್​ನಲ್ಲಿ ನಡೆದ 2009ರ ಐಪಿಎಲ್​ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರವಾಗಿ ಡೆಬ್ಯು ಮಾಡಿದ್ದರು. ಆದರೆ ಈ ಪಂದ್ಯದಲ್ಲಿ ಎದುರಾಳಿ ಮುಂಬೈ ಇಂಡಿಯನ್ಸ್​ ಗೆಲುವು ಸಾಧಿಸಿತ್ತು. ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಸ್ಪಿನ್ನರ್ ಎಂದು ಖ್ಯಾತಿ ಪಡೆದಿದ್ದರು. ಇವರು ಆಡಿದ ಐಪಿಎಲ್​ ಟೂರ್ನಿಗಳಲ್ಲಿ ಇದುವರೆಗೆ 187 ವಿಕೆಟ್​ಗಳನ್ನು ಉರುಳಿಸಿದ್ದಾರೆ. 833 ರನ್​ ಗಳಿಸಿದ್ದು ಇದರಲ್ಲಿ ಒಂದು ಅರ್ಧಶತಕ ಸೇರಿದೆ. ಐಪಿಎಲ್​ನಲ್ಲಿ ಅತಿ ಹೆಚ್ಚು ವಿಕೆಟ್​ ಪಡೆದವರ ಪೈಕಿ ಆರ್ ಅಶ್ವಿನ್ ಅವರು ಐದನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

 

ಈವರೆಗೆ ಆರ್ ಅಶ್ವಿನ್ ಅವರು 16 ಸೀಸನ್​ಗಳಲ್ಲಿ 5 ತಂಡಗಳ ಪರ ಆಡಿದ್ದರು. 2025ರ ಮೆಗಾ ಆಕ್ಷನ್​ನಲ್ಲಿ ಅಶ್ವಿನ್ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಭಾಗವಾಗಿದ್ದರು. ಆದರೆ ಕಳೆದ ಋತುವಿನಲ್ಲಿ ಪ್ರದರ್ಶನ ಕಳಪೆಯಾಗಿತ್ತು. ಸಿಎಸ್​ಕೆ ಪರವಾಗಿ ಒಟ್ಟು 7 ಸೀಸನ್​ಗಳನ್ನು ಆಡಿದ್ದ ಅಶ್ವಿನ್ ಉಳಿದವುಗಳನ್ನು ಬೇರೆ ತಂಡಗಳ ಪರವಾಗಿ ಬೌಲಿಂಗ್ ಮಾಡಿದ್ದರು.

ಆರ್ ಅಶ್ವಿನ್ ಆಡಿರುವ ಐಪಿಎಲ್ ತಂಡಗಳು ಎಂದರೆ, ಚೆನ್ನೈ ಸೂಪರ್ ಕಿಂಗ್ಸ್, ರೈಸಿಂಗ್ ಪುಣೆ ವಾರಿಯರ್ಸ್, ಕಿಂಗ್ಸ್​ ಇಲೆವೆನ್ ಪಂಜಾಬ್, ಡೆಲ್ಲಿಕ್ಯಾಪಿಟಲ್ಸ್​ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡದ ಪರ ಆಡಿದ್ದರು. ಇವಷ್ಟೇ ಅಲ್ಲದೇ ತಮಿಳುನಾಡು ತಂಡ, ದಿಂಡಿಗಲ್ ಡ್ರ್ಯಾಗನ್ಸ್, ವೋರ್ಸೆಸ್ಟರ್‌ಶೈರ್ (Worcestershire), ನಾಟಿಂಗ್ಹ್ಯಾಮ್ಶೈರ್ (Nottinghamshire) ಹಾಗೂ ಸರ್ರೆ (Surrey) ತಂಡಗಳಲ್ಲಿಯು ಆಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಸ್ಟಾರ್ ಅಥ್ಲೀಟ್ ಮೊದಲಿಂದಲೂ RCB ಅಭಿಮಾನಿ….

ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ್ದು, ಫ್ರಾಂಚೈಸಿಯ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿದೆ. ಕೇವಲ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು