IPLಗೆ ಗುಡ್​ಬೈ ಹೇಳಿದ ಆಫ್​ ಸ್ಪಿನ್ನರ್ ಆರ್​.ಅಶ್ವಿನ್

ಟೀಮ್ ಇಂಡಿಯಾದ ಮಾಜಿ ಆಫ್​ ಸ್ಪಿನ್ನರ್ ಹಾಗೂ ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಅವರು 2026ರ ಐಪಿಎಲ್​ಗೂ ಮೊದಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆರ್.ಅಶ್ವಿನ್ ಅವರು ಇತ್ತೀಚೆಗಷ್ಟೇ ಭಾರತದ ಟೆಸ್ಟ್​ ಕ್ರಿಕೆಟ್​ಗೆ ಗುಡ್​ಬೈ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಐಪಿಎಲ್​ಗೂ ನಿವೃತ್ತಿ ಘೋಷಿಸಿದ್ದಾರೆ.

ಆರ್.ಅಶ್ವಿನ್ ಅವರು ಲಂಡನ್​ನ ನ್ಯೂಲ್ಯಾಂಡ್ಸ್​ನಲ್ಲಿ ನಡೆದ 2009ರ ಐಪಿಎಲ್​ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರವಾಗಿ ಡೆಬ್ಯು ಮಾಡಿದ್ದರು. ಆದರೆ ಈ ಪಂದ್ಯದಲ್ಲಿ ಎದುರಾಳಿ ಮುಂಬೈ ಇಂಡಿಯನ್ಸ್​ ಗೆಲುವು ಸಾಧಿಸಿತ್ತು. ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಸ್ಪಿನ್ನರ್ ಎಂದು ಖ್ಯಾತಿ ಪಡೆದಿದ್ದರು. ಇವರು ಆಡಿದ ಐಪಿಎಲ್​ ಟೂರ್ನಿಗಳಲ್ಲಿ ಇದುವರೆಗೆ 187 ವಿಕೆಟ್​ಗಳನ್ನು ಉರುಳಿಸಿದ್ದಾರೆ. 833 ರನ್​ ಗಳಿಸಿದ್ದು ಇದರಲ್ಲಿ ಒಂದು ಅರ್ಧಶತಕ ಸೇರಿದೆ. ಐಪಿಎಲ್​ನಲ್ಲಿ ಅತಿ ಹೆಚ್ಚು ವಿಕೆಟ್​ ಪಡೆದವರ ಪೈಕಿ ಆರ್ ಅಶ್ವಿನ್ ಅವರು ಐದನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

 

ಈವರೆಗೆ ಆರ್ ಅಶ್ವಿನ್ ಅವರು 16 ಸೀಸನ್​ಗಳಲ್ಲಿ 5 ತಂಡಗಳ ಪರ ಆಡಿದ್ದರು. 2025ರ ಮೆಗಾ ಆಕ್ಷನ್​ನಲ್ಲಿ ಅಶ್ವಿನ್ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಭಾಗವಾಗಿದ್ದರು. ಆದರೆ ಕಳೆದ ಋತುವಿನಲ್ಲಿ ಪ್ರದರ್ಶನ ಕಳಪೆಯಾಗಿತ್ತು. ಸಿಎಸ್​ಕೆ ಪರವಾಗಿ ಒಟ್ಟು 7 ಸೀಸನ್​ಗಳನ್ನು ಆಡಿದ್ದ ಅಶ್ವಿನ್ ಉಳಿದವುಗಳನ್ನು ಬೇರೆ ತಂಡಗಳ ಪರವಾಗಿ ಬೌಲಿಂಗ್ ಮಾಡಿದ್ದರು.

ಆರ್ ಅಶ್ವಿನ್ ಆಡಿರುವ ಐಪಿಎಲ್ ತಂಡಗಳು ಎಂದರೆ, ಚೆನ್ನೈ ಸೂಪರ್ ಕಿಂಗ್ಸ್, ರೈಸಿಂಗ್ ಪುಣೆ ವಾರಿಯರ್ಸ್, ಕಿಂಗ್ಸ್​ ಇಲೆವೆನ್ ಪಂಜಾಬ್, ಡೆಲ್ಲಿಕ್ಯಾಪಿಟಲ್ಸ್​ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡದ ಪರ ಆಡಿದ್ದರು. ಇವಷ್ಟೇ ಅಲ್ಲದೇ ತಮಿಳುನಾಡು ತಂಡ, ದಿಂಡಿಗಲ್ ಡ್ರ್ಯಾಗನ್ಸ್, ವೋರ್ಸೆಸ್ಟರ್‌ಶೈರ್ (Worcestershire), ನಾಟಿಂಗ್ಹ್ಯಾಮ್ಶೈರ್ (Nottinghamshire) ಹಾಗೂ ಸರ್ರೆ (Surrey) ತಂಡಗಳಲ್ಲಿಯು ಆಡಿದ್ದಾರೆ.

Related Posts

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!