IPLಗೆ ಗುಡ್​ಬೈ ಹೇಳಿದ ಆಫ್​ ಸ್ಪಿನ್ನರ್ ಆರ್​.ಅಶ್ವಿನ್

ಟೀಮ್ ಇಂಡಿಯಾದ ಮಾಜಿ ಆಫ್​ ಸ್ಪಿನ್ನರ್ ಹಾಗೂ ಆಲ್​ರೌಂಡರ್ ರವಿಚಂದ್ರನ್ ಅಶ್ವಿನ್ ಅವರು 2026ರ ಐಪಿಎಲ್​ಗೂ ಮೊದಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆರ್.ಅಶ್ವಿನ್ ಅವರು ಇತ್ತೀಚೆಗಷ್ಟೇ ಭಾರತದ ಟೆಸ್ಟ್​ ಕ್ರಿಕೆಟ್​ಗೆ ಗುಡ್​ಬೈ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಐಪಿಎಲ್​ಗೂ ನಿವೃತ್ತಿ ಘೋಷಿಸಿದ್ದಾರೆ.

ಆರ್.ಅಶ್ವಿನ್ ಅವರು ಲಂಡನ್​ನ ನ್ಯೂಲ್ಯಾಂಡ್ಸ್​ನಲ್ಲಿ ನಡೆದ 2009ರ ಐಪಿಎಲ್​ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರವಾಗಿ ಡೆಬ್ಯು ಮಾಡಿದ್ದರು. ಆದರೆ ಈ ಪಂದ್ಯದಲ್ಲಿ ಎದುರಾಳಿ ಮುಂಬೈ ಇಂಡಿಯನ್ಸ್​ ಗೆಲುವು ಸಾಧಿಸಿತ್ತು. ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಸ್ಪಿನ್ನರ್ ಎಂದು ಖ್ಯಾತಿ ಪಡೆದಿದ್ದರು. ಇವರು ಆಡಿದ ಐಪಿಎಲ್​ ಟೂರ್ನಿಗಳಲ್ಲಿ ಇದುವರೆಗೆ 187 ವಿಕೆಟ್​ಗಳನ್ನು ಉರುಳಿಸಿದ್ದಾರೆ. 833 ರನ್​ ಗಳಿಸಿದ್ದು ಇದರಲ್ಲಿ ಒಂದು ಅರ್ಧಶತಕ ಸೇರಿದೆ. ಐಪಿಎಲ್​ನಲ್ಲಿ ಅತಿ ಹೆಚ್ಚು ವಿಕೆಟ್​ ಪಡೆದವರ ಪೈಕಿ ಆರ್ ಅಶ್ವಿನ್ ಅವರು ಐದನೇ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

 

ಈವರೆಗೆ ಆರ್ ಅಶ್ವಿನ್ ಅವರು 16 ಸೀಸನ್​ಗಳಲ್ಲಿ 5 ತಂಡಗಳ ಪರ ಆಡಿದ್ದರು. 2025ರ ಮೆಗಾ ಆಕ್ಷನ್​ನಲ್ಲಿ ಅಶ್ವಿನ್ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಭಾಗವಾಗಿದ್ದರು. ಆದರೆ ಕಳೆದ ಋತುವಿನಲ್ಲಿ ಪ್ರದರ್ಶನ ಕಳಪೆಯಾಗಿತ್ತು. ಸಿಎಸ್​ಕೆ ಪರವಾಗಿ ಒಟ್ಟು 7 ಸೀಸನ್​ಗಳನ್ನು ಆಡಿದ್ದ ಅಶ್ವಿನ್ ಉಳಿದವುಗಳನ್ನು ಬೇರೆ ತಂಡಗಳ ಪರವಾಗಿ ಬೌಲಿಂಗ್ ಮಾಡಿದ್ದರು.

ಆರ್ ಅಶ್ವಿನ್ ಆಡಿರುವ ಐಪಿಎಲ್ ತಂಡಗಳು ಎಂದರೆ, ಚೆನ್ನೈ ಸೂಪರ್ ಕಿಂಗ್ಸ್, ರೈಸಿಂಗ್ ಪುಣೆ ವಾರಿಯರ್ಸ್, ಕಿಂಗ್ಸ್​ ಇಲೆವೆನ್ ಪಂಜಾಬ್, ಡೆಲ್ಲಿಕ್ಯಾಪಿಟಲ್ಸ್​ ಹಾಗೂ ರಾಜಸ್ಥಾನ್ ರಾಯಲ್ಸ್​ ತಂಡದ ಪರ ಆಡಿದ್ದರು. ಇವಷ್ಟೇ ಅಲ್ಲದೇ ತಮಿಳುನಾಡು ತಂಡ, ದಿಂಡಿಗಲ್ ಡ್ರ್ಯಾಗನ್ಸ್, ವೋರ್ಸೆಸ್ಟರ್‌ಶೈರ್ (Worcestershire), ನಾಟಿಂಗ್ಹ್ಯಾಮ್ಶೈರ್ (Nottinghamshire) ಹಾಗೂ ಸರ್ರೆ (Surrey) ತಂಡಗಳಲ್ಲಿಯು ಆಡಿದ್ದಾರೆ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!