ಸೀರೆಯಲ್ಲಿ ಅರಳಿದ ಆಪರೇಶನ್ ಸಿಂಧೂರ.

ಗದಗ ಜಿಲ್ಲೆಯ ಗಜೇಂದ್ರಗಡದ ನೇಕಾರರೊಬ್ಬರು “ಆಪರೇಶನ್ ಸಿಂಧೂರ” ಹೆಸರಿನ ಕೈಮಗ್ಗದ ಸೀರೆಯನ್ನು ತಯಾರಿಸಿ ಗಮನ ಸೆಳೆದಿದ್ದಾರೆ. ಈ ಸೀರೆ ಶುದ್ಧ ಹತ್ತಿ ಮತ್ತು ರೇಷ್ಮೆ ಬಾರ್ಡರ್‌ನಿಂದ ತಯಾರಿಸಲಾಗಿದ್ದು, ಆಪರೇಶನ್ ಸಿಂಧೂರ ಎಂಬ ಮುದ್ರಣ ಮತ್ತು ತ್ರಿವರ್ಣ ಧ್ವಜದ ವಿನ್ಯಾಸ ಹೊಂದಿದೆ. ಈ ಸೀರೆಯ ಬೆಲೆ ಎಷ್ಟು ಎಂಬ ಮಾಹಿತಿ ಇಲ್ಲಿದೆ. ಸೀರೆಯಲ್ಲಿ ‘ಆಪರೇಷನ್ ಸಿಂಧೂರ’ ಶೌರ್ಯ ನೇಯ್ದ ಗದಗಿನ ನೇಕಾರ ನೇಕಾರ ತೇಜಪ್ಪ ಚಿನ್ನೂರ್

ಏಪ್ರಿಲ್ 22ರಂದು ಪಹಲ್ಗಾಮ್​ನಲ್ಲಿ ಉಗ್ರರು ಮಾಡಿದ್ದ ದಾಳಿಯಲ್ಲಿ ಕರ್ನಾಟಕ ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಬಳಿಕ ಭಾರತೀಯ ಸೇನೆ ಮೇ 7ರಂದು ‘ಆಪರೇಶನ್ ಸಿಂಧೂರ’ (operation sindoor) ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಪ್ರಧಾನಿ ಮೋದಿ ಆಪರೇಶನ್ ಸಿಂಧೂರವನ್ನು ದೇಶದ ಹೆಣ್ಣುಮಕ್ಕಳಿಗೆ ಸಮರ್ಪಿಸಿದ್ದರು. ಇದೀಗ ಇದೇ ಆಪರೇಶನ್ ಸಿಂಧೂರ ಹೆಸರಿನಲ್ಲಿ ಗದಗಿನ (gadag) ನೇಕಾರರೊಬ್ಬರು ಕೈಮಗ್ಗದಲ್ಲಿ ಸೀರೆ ಸಿದ್ಧಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಆಪರೇಶನ್ ಸಿಂಧೂರ ಹೆಸರಲಿನಲ್ಲಿ ಸೀರೆ ಸಿದ್ಧಪಡಿಸುವ ಕಲ್ಪನೆ ನೇಕಾರ ತೇಜಪ್ಪ ಚಿನ್ನೂರ್​ ಅವರದ್ದು. ತೇಜಪ್ಪ ಚಿನ್ನೂರ್ ಅವರು ಗದಗ ಜಿಲ್ಲೆಯ ಗಜೇಂದ್ರಗಡದ ನೇಕಾರರು. ಆಪರೇಶನ್ ಸಿಂಧೂರ ಹೆಸರಲಿನಲ್ಲಿ ಕೈಮಗ್ಗದಲ್ಲಿ ಸೀರೆ ತಯಾರಿಸಿದ್ದಾರೆ. ಆ ಮೂಲಕ ಅವರು ತಮ್ಮ ಕಾಯಕದಿಂದಲೇ ಭಾರತೀಯ ಸೇನೆ ಕಾರ್ಯಾಚರಣೆಗೆ ಗೌರವ ಸೂಚಿಸಿದ್ದಾರೆ.

ಈ ಸೀರೆಯನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, “ಆಪರೇಷನ್ ಸಿಂಧೂರ” ಎಂದು ದಪ್ಪವಾಗಿ ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ. ಸೀರೆಯ ರೇಷ್ಮೆ ಬಾರ್ಡರ್​ನಲ್ಲಿ ತ್ರಿವರ್ಣ ಧ್ವಜದ ಕಲರ್​ನಲ್ಲಿ ಮೂರು ಯುದ್ಧ ವಿಮಾನಗಳನ್ನು ಕಸೂತಿ ಮಾಡಲಾಗಿದೆ. ಇಂದು ಅನೇಕರು ಆಪರೇಶನ್ ಸಿಂಧೂರ ಸೀರೆಗಾಗಿ ತೇಜಪ್ಪ ಚಿನ್ನೂರ್​ ಅವರನ್ನು ಹುಡುಕಿಕೊಂಡು ಬರುತ್ತಿದ್ದಾರಂತೆ.

https://youtu.be/r3q_ZqxNLVY?si=hjul8bZC9V4znXRSಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: CM ಸಿದ್ದರಾಮಯ್ಯ

ಪಟ್ಟೇದಂಚಿನ ಸೀರೆಗಳಿಗೆ ಗಜೇಂದ್ರಗಡ ಹೆಸರುವಾಸಿ
ಹೇಳಿಕೇಳಿ ಗಜೇಂದ್ರಗಡ ಶುದ್ಧ ಹತ್ತಿ ನೂಲಿನಿಂದ ತಯಾರಿಸಲ್ಪಡುವ ಪಟ್ಟೇದಂಚಿನ ಸೀರೆಗಳಿಗೆ ಹೆಸರುವಾಸಿ. ಈ ವರ್ಷ ಅವುಗಳಿಗೆ ಜಿಐ ಟ್ಯಾಗ್ ಕೂಡ ಸಿಕ್ಕಿದೆ. ಪ್ರಸ್ತುತ, ಇಲ್ಲಿ ಸುಮಾರು 400 ಕೈಮಗ್ಗಗಳಿದ್ದು, ಅವುಗಳಲ್ಲಿ ಸುಮಾರು 200 ಕೈಮಗ್ಗಗಳಿಂದ ಈ ಪಟ್ಟೇದಂಚಿನ ಸೀರೆಗಳನ್ನು ನೇಯಲಾಗುತ್ತದೆ. ಇನ್ನು ಈ ಹೊಸ ಬಗೆಯ ಆಪರೇಷನ್ ಸಿಂಧೂರ ಸೀರೆಗಳು ಸಹ ಇದೇ ವಿಧಕ್ಕೆ ಸೇರಿವೆ. ಇವುಗಳನ್ನು ಶುದ್ಧ ಹತ್ತಿಯಿಂದ ಮತ್ತು ರೇಷ್ಮೆ ಬಾರ್ಡರ್​​ನೊಂದಿಗೆ ತಯಾರಿಸಲಾಗುತ್ತದೆ. ಸೀರೆಯ ಒಂದು ಬದಿಯನ್ನು ಬಲಪಡಿಸಲು, ದಾರಗಳನ್ನು ತುಂಡುಗಳಾಗಿ ಕತ್ತರಿಸಲಾಗುತ್ತದೆ. ಬಳಿಕ ವಾರ್ಪ್ ತಯಾರಿಸಲಾಗುತ್ತದೆ. ಕೈಮಗ್ಗದಿಂದ ಸೀರೆಯಲ್ಲಿ ಸಾಂಪ್ರದಾಯಿಕ ವಿನ್ಯಾಸಗಳನ್ನು ರಚಿಸಲಾಗುತ್ತದೆ.

ಆಪರೇಶನ್ ಸಿಂಧೂರ ಸೀರೆ ಬೆಲೆ ಎಷ್ಟು? ಪಟ್ಟೇದಂಚಿನ ರೇಷ್ಮೆ ಸೀರೆಗಳ ಬೆಲೆ 2ರಿಂದ 5 ಸಾವಿರ ರೂ. ಗಳವರೆಗೆ ಇರುತ್ತದೆ. ಆದರೆ ಆಪರೇಷನ್ ಸಿಂಧೂರ ಸೀರೆಗಳು ವಿಶೇಷವಾಗಿ 4 ಸಾವಿರ ರೂ. ಬೆಲೆಯಿಂದ ಪ್ರಾರಂಭವಾಗುತ್ತದೆ. ಗುಣಮಟ್ಟಕ್ಕೆ ತಕ್ಕಂತೆ ಅದರ ಬೆಲೆಯೂ ಹೆಚ್ಚಳವಾಗುತ್ತದೆ.

ನೇಕಾರ ತೇಜಪ್ಪ ಚಿನ್ನೂರ್ ಅವರು ಕಳೆದ 40 ವರ್ಷಗಳಿಂದ ಕೈಮಗ್ಗದಲ್ಲಿ ಸೀರೆ ನೇಯುವ ಕಾಯಕ ಮಾಡುತ್ತಿದ್ದಾರೆ. ಜೊತೆಗೆ ಗಜೇಂದ್ರಗಡ ನೇಕಾರರ ಸಹಕಾರಿ ಉತ್ಪಾದಕರ ಸಂಘವನ್ನು ಸ್ಥಾಪಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ನಡೆಯಲಿರುವ 11ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಸಂದರ್ಭದಲ್ಲಿ ಅವರಿಗೆ 20 ಸಾವಿರ ರೂ. ಬಹುಮಾನ ಮತ್ತು ಸ್ಮರಣಿಕೆಯನ್ನು ನೀಡಲಾಗುತ್ತಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು