ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್ ಸೇನೆ: ಭಾರತ ಹೇಳಿದ್ದೇನು?

ಲಾಹೋರ್ : ಪಾಕಿಸ್ತಾನದ ವಾಯುಪ್ರದೇಶ ಉಲ್ಲಂಘಿಸಿದ ಭಾರತದ 12 ಡ್ರೋನ್ಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ಪಾಕಿಸ್ತಾನ ಸೇನೆ ಗುರುವಾರ ತಿಳಿಸಿರುವುದಾಗಿ ‘ರಾಯಿಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಹೆಚ್ಚಿದ್ದು ಕಾಶ್ಮೀರ ಗಡಿಯಲ್ಲಿ ಸುಮಾರು 15 ನಾಗರಿಕರನ್ನು ಪಾಕಿಸ್ತಾನ ಸೇನೆ ಗುಂಡಿನ ದಾಳಿ ಮೂಲಕ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ, ಗುರುವಾರ ಬೆಳಗ್ಗೆ ಲಾಹೋರ್ನಲ್ಲಿ ಸ್ಫೋಟ ಸಂಭವಿಸಿತ್ತು. ಅದಾದ ನಂತರ ಕರಾಚಿಯಲ್ಲೂ ಸ್ಫೋಟ ಸಂಭವಿಸಿದೆ ಎಂದು ಕೆಲವು ಮೂಲಗಳು ತಿಳಿಸಿವೆ.


ಭಾರತವು ಇಸ್ರೇಲಿ ಹರೋಪ್ ಡ್ರೋನ್ಗಳನ್ನು ಕರಾಚಿ ಮತ್ತು ಲಾಹೋರ್ನ ಸೇರಿದಂತೆ ಹಲವು ಸ್ಥಳಗಳಿಗೆ ಕಳುಹಿಸಿದೆ. ಅವುಗಳನ್ನು ಹೊಡೆದುರುಳಿಸಿದ್ದೇವೆ. ಅವುಗಳ ಅವಶೇಷಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಅಹ್ಮದ್ ಷರೀಫ್ ಚೌಧರಿ ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ತಿಳಿಸಿದೆ.

ಭಾರತ ಹೇಳಿದ್ಧೇನು?
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿರುವ ಸಿಂದೂರ್ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಹಾಗೆಂದು, ನಮ್ಮ ಮೇಲೆ ದಾಳಿ ನಡೆಸಿದರೆ ಸುಮ್ಮನಿರುವ ಮಾತೇ ಇಲ್ಲ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ. ಆಪರೇಷನ್ ಸಿಂದೂರ್ನಲ್ಲಿ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ 100 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಲಾಹೋರ್, ಕರಾಚಿಯಲ್ಲಿ ಸ್ಫೋಟ
ಗುರವಾರ ಬೆಳಗ್ಗೆ ಲಾಹೋರ್ನಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈಗ ಪಾಕಿಸ್ತಾನದ ಆರ್ಥಿಕ ರಾಜಧಾನಿ ಎಂದು ಪರಿಗಣಿಸಲಾಗಿರುವ ಕರಾಚಿಯಲ್ಲಿ ಕೂಡ ಸ್ಫೋಟ ಸಂಭವಿಸಿದ ಬಗ್ಗೆ ವರದಿಯಾಗಿವೆ. ಕರಾಚಿಯಲ್ಲಿ ಸಂಭವಿಸಿದ ಸ್ಫೋಟವು ಪಾಕಿಸ್ತಾನದಾದ್ಯಂತ ಭೀತಿಯನ್ನು ಸೃಷ್ಟಿಸಿದೆ. ಸ್ಫೋಟದ ನಂತರ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ಕರಾಚಿಯಲ್ಲಿ ಡ್ರೋನ್ ಸ್ಫೋಟ ಸಂಭವಿಸಿದ್ದು, ಆ ನಂತರ ಇಡೀ ಪ್ರದೇಶದಲ್ಲಿ ಭೀತಿಯ ವಾತಾವರಣವಿದೆ. ಸೇನೆಯು ಆ ಪ್ರದೇಶವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಪಾಕಿಸ್ತಾನದ ಎಲ್ಲಾ ಪರಮಾಣು ಬಾಂಬ್ಗಳು ಕರಾಚಿಯಲ್ಲಿ ಸಂಗ್ರಹಿಸಲ್ಪಟ್ಟಿವೆ ಎಂಬುದು ಗಮನಾರ್ಹ.ಕರಾಚಿಯಲ್ಲಿ ಡ್ರೋನ್ ಸ್ಫೋಟ ಸಂಭವಿಸಿರುವುದು ಪಾಕಿಸ್ತಾನದ ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕರಾಚಿ ಸ್ಫೋಟವನ್ನು ಭದ್ರತಾ ವ್ಯವಸ್ಥೆಯ ಪ್ರಮುಖ ಉಲ್ಲಂಘನೆ ಎಂದು ಬಣ್ಣಿಸಲಾಗುತ್ತಿದೆ. ಲಾಹೋರ್ನ ನೌಕಾ ನೆಲೆ ಮತ್ತು ಕರಾಚಿಯ ಸೇನಾ ನೆಲೆಯ ಬಳಿ ಸ್ಫೋಟಗಳು ಸಂಭವಿಸಿವೆ ಎಂದು ವರದಿಗಳು ತಿಳಿಸಿವೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!