ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್ ಸೇನೆ: ಭಾರತ ಹೇಳಿದ್ದೇನು?

ಲಾಹೋರ್ : ಪಾಕಿಸ್ತಾನದ ವಾಯುಪ್ರದೇಶ ಉಲ್ಲಂಘಿಸಿದ ಭಾರತದ 12 ಡ್ರೋನ್ಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ಪಾಕಿಸ್ತಾನ ಸೇನೆ ಗುರುವಾರ ತಿಳಿಸಿರುವುದಾಗಿ ‘ರಾಯಿಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಹೆಚ್ಚಿದ್ದು ಕಾಶ್ಮೀರ ಗಡಿಯಲ್ಲಿ ಸುಮಾರು 15 ನಾಗರಿಕರನ್ನು ಪಾಕಿಸ್ತಾನ ಸೇನೆ ಗುಂಡಿನ ದಾಳಿ ಮೂಲಕ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ, ಗುರುವಾರ ಬೆಳಗ್ಗೆ ಲಾಹೋರ್ನಲ್ಲಿ ಸ್ಫೋಟ ಸಂಭವಿಸಿತ್ತು. ಅದಾದ ನಂತರ ಕರಾಚಿಯಲ್ಲೂ ಸ್ಫೋಟ ಸಂಭವಿಸಿದೆ ಎಂದು ಕೆಲವು ಮೂಲಗಳು ತಿಳಿಸಿವೆ.


ಭಾರತವು ಇಸ್ರೇಲಿ ಹರೋಪ್ ಡ್ರೋನ್ಗಳನ್ನು ಕರಾಚಿ ಮತ್ತು ಲಾಹೋರ್ನ ಸೇರಿದಂತೆ ಹಲವು ಸ್ಥಳಗಳಿಗೆ ಕಳುಹಿಸಿದೆ. ಅವುಗಳನ್ನು ಹೊಡೆದುರುಳಿಸಿದ್ದೇವೆ. ಅವುಗಳ ಅವಶೇಷಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಅಹ್ಮದ್ ಷರೀಫ್ ಚೌಧರಿ ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ತಿಳಿಸಿದೆ.

ಭಾರತ ಹೇಳಿದ್ಧೇನು?
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿರುವ ಸಿಂದೂರ್ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಹಾಗೆಂದು, ನಮ್ಮ ಮೇಲೆ ದಾಳಿ ನಡೆಸಿದರೆ ಸುಮ್ಮನಿರುವ ಮಾತೇ ಇಲ್ಲ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ. ಆಪರೇಷನ್ ಸಿಂದೂರ್ನಲ್ಲಿ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ 100 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಲಾಹೋರ್, ಕರಾಚಿಯಲ್ಲಿ ಸ್ಫೋಟ
ಗುರವಾರ ಬೆಳಗ್ಗೆ ಲಾಹೋರ್ನಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈಗ ಪಾಕಿಸ್ತಾನದ ಆರ್ಥಿಕ ರಾಜಧಾನಿ ಎಂದು ಪರಿಗಣಿಸಲಾಗಿರುವ ಕರಾಚಿಯಲ್ಲಿ ಕೂಡ ಸ್ಫೋಟ ಸಂಭವಿಸಿದ ಬಗ್ಗೆ ವರದಿಯಾಗಿವೆ. ಕರಾಚಿಯಲ್ಲಿ ಸಂಭವಿಸಿದ ಸ್ಫೋಟವು ಪಾಕಿಸ್ತಾನದಾದ್ಯಂತ ಭೀತಿಯನ್ನು ಸೃಷ್ಟಿಸಿದೆ. ಸ್ಫೋಟದ ನಂತರ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ಕರಾಚಿಯಲ್ಲಿ ಡ್ರೋನ್ ಸ್ಫೋಟ ಸಂಭವಿಸಿದ್ದು, ಆ ನಂತರ ಇಡೀ ಪ್ರದೇಶದಲ್ಲಿ ಭೀತಿಯ ವಾತಾವರಣವಿದೆ. ಸೇನೆಯು ಆ ಪ್ರದೇಶವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಪಾಕಿಸ್ತಾನದ ಎಲ್ಲಾ ಪರಮಾಣು ಬಾಂಬ್ಗಳು ಕರಾಚಿಯಲ್ಲಿ ಸಂಗ್ರಹಿಸಲ್ಪಟ್ಟಿವೆ ಎಂಬುದು ಗಮನಾರ್ಹ.ಕರಾಚಿಯಲ್ಲಿ ಡ್ರೋನ್ ಸ್ಫೋಟ ಸಂಭವಿಸಿರುವುದು ಪಾಕಿಸ್ತಾನದ ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕರಾಚಿ ಸ್ಫೋಟವನ್ನು ಭದ್ರತಾ ವ್ಯವಸ್ಥೆಯ ಪ್ರಮುಖ ಉಲ್ಲಂಘನೆ ಎಂದು ಬಣ್ಣಿಸಲಾಗುತ್ತಿದೆ. ಲಾಹೋರ್ನ ನೌಕಾ ನೆಲೆ ಮತ್ತು ಕರಾಚಿಯ ಸೇನಾ ನೆಲೆಯ ಬಳಿ ಸ್ಫೋಟಗಳು ಸಂಭವಿಸಿವೆ ಎಂದು ವರದಿಗಳು ತಿಳಿಸಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!