ಪಾಕ್‌ ಆಟಗಾರನಿಗೆ ಬಿತ್ತು ದಂಡ – ಮಹಿಳೆ ಜೊತೆ ಅಸಭ್ಯ ವರ್ತನೆ

ಕೊಲಂಬೋ: ಟಿ20 ವಿಶ್ವಕಪ್‌ ಟೂರ್ನಿಯಾಡಲು ಶ್ರೀಲಂಕಾಗೆ ಬಂದಿದ್ದ ಪಾಕಿಸ್ತಾನದಆಟಗಾರನೊಬ್ಬ ಕ್ಯಾಂಡಿಯ ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆತಿಥೇಯ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಕೊನೆಯ ಸೂಪರ್ 8 ಪಂದ್ಯಕ್ಕೂ ಮುನ್ನ ಈ ಘಟನೆ ನಡೆದಿದೆ. ಮಹಿಳಾ ಸಿಬ್ಬಂದಿ ಕೂಗುತ್ತಾ ಸಹಾಯಕ್ಕಾಗಿ ಕರೆ ಮಾಡಿದಾಗ ಹೋಟೆಲ್ ಸಿಬ್ಬಂದಿ ಆಕೆಯ ರಕ್ಷಣೆಗೆ ಬಂದು ಪಾಕಿಸ್ತಾನ ತಂಡದ ವ್ಯವಸ್ಥಾಪಕ ನವೈದ್ ಚೀಮಾ ಅವರಿಗೆ ವಿಷಯ ತಿಳಿಸಿದ್ದಾರೆ.

ಗೋಲ್ಡನ್ ಕ್ರೌನ್ ಹೋಟೆಲ್‌ನ ಆಡಳಿತ ಮಂಡಳಿ ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ಆತನ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿತು. ಆಟಗಾರನ ಪರವಾಗಿ ನವೈದ್ ಚೀಮಾ ಕ್ಷಮೆಯಾಚಿಸಿದರು. ಬಳಿಕ ಅನುಚಿತ ವರ್ತನೆ ತೋರಿದ ಆಟಗಾರನಿಗೆ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

 

ಶ್ರೀಲಂಕಾ ವಿರುದ್ಧ 5 ರನ್‌ಗಳಿಂದ ಪಂದ್ಯ ಗೆದ್ದಿದ್ದದ್ದರೂ ನೆಟ್‌ ರನ್‌ ರೇಟ್‌ ಕಡಿಮೆ ಇದ್ದ ಕಾರಣ ಪಾಕ್‌ ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಯಿತು. ತಂಡ ಭಾನುವಾರ ಮತ್ತು ಸೋಮವಾರ ಪಾಕಿಸ್ತಾನಕ್ಕೆ ತೆರಳಿತ್ತು.

 

ಈ ಆಟಗಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಶಿಸ್ತು ಸಮಿತಿಯ ಮುಂದೆ ಹಾಜರಾಗುವ ಸಾಧ್ಯತೆಯಿದೆ ಮತ್ತು ಅವರಿಗೆ ಹೆಚ್ಚಿನ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ.

ಪಾಕಿಸ್ತಾನಿ ಆಟಗಾರರು ಪ್ರವಾಸದ ಸಮಯದಲ್ಲಿ ಅಸಭ್ಯ ವರ್ತನೆ ತೋರುವುದು ಹೊಸದೆನಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿ ಹುಡುಗಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪಾಕಿಸ್ತಾನ ಶಾಹೀನ್ಸ್ ತಂಡದ ಯುವ ಬ್ಯಾಟರ್ ಹೈದರ್ ಅಲಿಯನ್ನು ಕಳೆದ ವರ್ಷ ಮ್ಯಾಂಚೆಸ್ಟರ್ ಪೊಲೀಸರು ಬಂಧಿಸಲಾಗಿತ್ತು. ಹೈದರ್‌ನನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಿಡುಗಡೆ ಮಾಡಲಾಗಿತ್ತು.

ಕೆಲವು ವರ್ಷಗಳ ಹಿಂದೆ ಮಲೇಷ್ಯಾ ಪ್ರವಾಸದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಪಾಕಿಸ್ತಾನ ತಂಡದ ಮಸಾಜ್ ಪಟು ಮಲಾಂಗ್ ಅಲಿ ಅವರ ಮೇಲೂ ದೂರು ದಾಖಲಾಗಿ ದಂಡ ವಿಧಿಸಲಾಗಿತ್ತು.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!