ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ; FIR ದಾಖಲು

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲು ಪ್ರಕರಣಗಳು ದಾಖಲಾಗಿವೆ. ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಎನ್​​ಐಎ ಕೂಡ ಮಧ್ಯೆ ಪ್ರವೇಶಿಸಿದೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ (parappana agrahara jail) ಕರ್ಮಕಾಂಡಗಳು ಒಂದೊಂದಾಗಿ ಹೊರಬರುತ್ತಿವೆ. ಐಷಾರಾಮಿ ಬದುಕಿನ ಒಂದೊಂದೇ ಕರಾಳತೆ ಬಯಲಾಗುತ್ತಿದೆ. ಈ ಬೆನ್ನಲ್ಲೇ ಗೃಹ ಇಲಾಖೆ ಅಲರ್ಟ್ ಆಗಿದೆ. ಇಬ್ಬರು ಜೈಲಧಿಕಾರಿಗಳ ತಲೆದಂಡವಾಗಿದೆ. ಇದೀಗ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಎನ್​​ಸಿಆರ್​​ ಮತ್ತು ಒಂದು ಎಫ್​​ಐಆರ್​​​ ದಾಖಲಾಗಿದೆ. ಜೊತೆಗೆ ಎನ್​​ಐಎ ಎಂಟ್ರಿ ಆಗಿದೆ.

ವಿಕೃತ ಕಾಮಿ, ನಟೋರಿಯಸ್ ರೌಡಿಶೀಟರ್​ಗಳು, ಅಷ್ಟೇ ಯಾಕೆ ಮೋಸ್ಟ್ ವಾಂಟೆಡ್ ಉಗ್ರಗಾಮಿಗಳು ಪರಪ್ಪನ ಅಗ್ರಹಾರ ಜೈಲಿಗೆ ಯಾವುದೋ ರೆಸಾರ್ಟ್​​ಗೆ ಬಂದಂತಿದ್ದಾರೆ. ಹೈಪ್ರೊಫೈಲ್ ಕೇಸ್​ಗಳ ಆರೋಪಿಗಳು, ಅಪರಾಧಿಗಳು ಶಿಕ್ಷೆ ಸನುಭವಿಸುತ್ತಿರುವ ಈ ಜೈಲು ಕ್ರಿಮಿನಲ್​ಗಳ ಪಾಲಿಗೆ ಸ್ವರ್ಗ. ಅದಕ್ಕೆ ಸಾಕ್ಷಿಯಾಗಿ ಕೈದಿಗಳು ಮೋಜು ಮಸ್ತಿ ಮಾಡುತ್ತಿದ್ದ ಸಾಲು ಸಾಲು ವಿಡಿಯೋಗಳು ರಾಜ್ಯದ ಜನರನ್ನು ಬೆಚ್ಚಿಬೀಳಿಸಿವೆ.

ಒಟ್ಟು ನಾಲ್ಕು ಪ್ರಕರಣಗಳ ದಾಖಲು
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಈವರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಒಟ್ಟು ನಾಲ್ಕು ದೂರು ದಾಖಲಾಗಿವೆ. ಈ ಪೈಕಿ ಮೂರು ಎನ್​​ಸಿ ಆರ್​​ ದಾಖಲಾದರೆ, ಒಂದು ಎಫ್ಐಆರ್​​ ದಾಖಲಾಗಿದೆ.
ಇಂದು ಸಸ್ಪೆಂಡ್ ಆಗಿರುವ ಜೈಲಿನ ಅಧೀಕ್ಷಕ ಮ್ಯಾಗೇರಿ ಅವರಿಂದಲೇ ದೂರು ನೀಡಲಾಗಿದೆ. ಅವರ ದೂರಿನ ಮೇರೆಗೆ ಜೈಲಿನಲ್ಲಿ ತಟ್ಟೆ, ಡ್ರಮ್ ಬಾರಿಸಿ ಡ್ಯಾನ್ಸ್ ಮಾಡಿದ್ದ ಸಜಾ ಬಂಧಿ ಪ್ಯಾಟ್ರಿಕ್ ಟೀಮ್​​​ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಎನ್​​ಸಿಆರ್​​ ಪ್ರಕರಣಗಳನ್ನ ಪೊಲೀಸರು ಎಫ್ಐಆರ್ ಮಾಡಿಕೊಳ್ಳಲಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಎನ್​ಐಎ ಅಧಿಕಾರಿಗಳ ಎಂಟ್ರಿ
ಇನ್ನು ಪರಪ್ಪನ ಅಗ್ರಹಾರದಲ್ಲಿ ಉಗ್ರರ ಕೈಗೆ ಮೊಬೈಲ್ ಸಿಗುತ್ತಿದ್ದಂತೆ ಎನ್​ಐಎ ಅಧಿಕಾರಿಗಳ ಎಂಟ್ರಿಯಾಗಿದೆ. ಸಿಸಿಬಿ ಕಚೇರಿಗೆ ಬಂದ ಅಧಿಕಾರಿಗಳ ತಂಡ, ಜೈಲಿನಲ್ಲಿ ಯಾವಾಗ ವಿಡಿಯೋ ರೆಕಾರ್ಡ್ ಮಾಡಲಾಗಿದೆ? ಜೈಲಿನಲ್ಲಿ ಉಗ್ರರು ಬಳಸುತ್ತಿದ್ದ ಮೊಬೈಲ್ ಫೋನ್ ಸಿಕ್ಕಿದೆಯಾ ಎಂಬೆಲ್ಲಾ ಮಾಹಿತಿ ಪಡೆದಿದ್ದಾರೆ. ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿಲ್ಲ. ಈ ಬಗ್ಗೆ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ.

ಇಂದು ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸಭೆ ಮಾಡಿದರು. ಸುಮಾರು ಎರಡು ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪರಮೇಶ್ವರ್, ತರಾಟೆಗೆ ತೆಗೆದುಕೊಂಡರು. ಸಭೆಯ ಬಳಿಕ ಮಾತನಾಡಿದ ಪರಮೇಶ್ವರ್, ಜೈಲು ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ, ಹಾಗೂ ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್​ರನ್ನು ಬೇರೆ ಕಡೆಗೆ ಎತ್ತಂಗಡಿ ಮಾಡಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!