ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ: ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಪರಪ್ಪನ ಅಗ್ರಹಾರದ ಕರ್ಮಕಾಂಡಗಳು ಒಂದೊಂದಾಗಿ ಬಯಲಾಗುತ್ತಿವೆ. ಜೈಲಿನಿಂದ ಹೊರಬಿದ್ದ ದೃಶ್ಯಗಳು ಜೈಲು ವ್ಯವಸ್ಥೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದೆ. ಉಗ್ರರು, ನಟೋರಿಯಸ್ ರೇಪಿಸ್ಟ್ ಹಾಗೂ ಅಪಾಯಕಾರಿ ಕೈದಿಗಳಿಗೆ ಸಿಗ್ತಿರೋ ಸವಲತ್ತು ಸಮಾಜವನ್ನ ಆತಂಕಕ್ಕೆ ದೂಡುವಂತೆ ಮಾಡಿದೆ. ಈ ಅಕ್ರಮ ಚಟುವಟಿಕೆಗಳ ವಿರುದ್ಧ ಬಿಜೆಪಿ ಹೋರಾಟ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರನ್ನ ಹೊಣೆ ಮಾಡಿರೋ ಬಿಜೆಪಿ ನಿಗಿನಿಗಿ ಅಂತಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮುಸಲ್ಮಾನರನ್ನು ಮುಟ್ಟಿದರೆ ನಮಗೆ ಪ್ರಮೋಷನ್ ಇಲ್ಲ ಅಂತಾ ಕರ್ನಾಟಕದ ಪೊಲೀಸರು ಭಯಗೊಂಡಿದ್ದಾರೆ. ಯಾವ ಸ್ಟೇಷನ್ ಗಳಲ್ಲೂ ಈಗ ಮುಸಲ್ಮಾನರ ಮೇಲೆ ಏನೂ ಕೇಸ್ ಮಾಡಲ್ಲ. ಈಗ ಅದು ಪರಪ್ಪನ ಅಗ್ರಹಾರದವರೆಗೆ ಹೋಗಿದೆ. ಪರಪ್ಪನ ಅಗ್ರಹಾರದಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ ಕೊಡುತ್ತಾರೆ. ದೇಶದಲ್ಲಿರುವ ಎಲ್ಲಾ ಭಯೋತ್ಪಾದಕರು ನಮಗೆ ಕರ್ನಾಟಕ ಕೊಡಿ ಎಂದು ಅರ್ಜಿ ಹಾಕುತ್ತಿದ್ದಾರಂತೆ. ದರ್ಶನ್ ಬೀಡಿ ಸೇದಿದ್ದಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿ ಬೇಲ್ ಕ್ಯಾನ್ಸಲ್ ಮಾಡಿಸಿದರು. ಇದರಲ್ಲಿ ಸುಪ್ರೀಂ ಕೋರ್ಟ್ ಗೆ ಸರ್ಕಾರ ಹೋಗಲ್ಲ. ದರ್ಶನ್ ಗೆ ಒಂದು ಕಾನೂನು, ಭಯೋತ್ಪಾದಕರಿಗೆ ರಾಜಾತಿಥ್ಯ. ಯಾಕೆಂದರೆ ದರ್ಶನ್ ಹಿಂದೂ, ಇವರು ಮುಸಲ್ಮಾನರು. ದರ್ಶನ್ ತಪ್ಪು ಮಾಡಿದ್ದಾರೆ, ಇಲ್ಲ ಅಂತಾ ಹೇಳಲ್ಲ. ಆದರೆ ಕಾನೂನು ಎಲ್ಲರಿಗೂ ಒಂದೇ ತಾನೇ. ದೇಶದ್ರೋಹಿಗೆ ಒಂದು ಕಾನೂನು, ದರ್ಶನ್ ಗೆ ಒಂದು ಕಾನೂನಾ? ಎಂದು ಪ್ರಶ್ನಿಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!