ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜಣ್ಣ ಬೆಂಬಲಿಗ.

ಸಚಿವ ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಮಧುಗಿರಿ ಬಂದ್​​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ರಾಜಣ್ಣರನ್ನು ವಜಾ ಮಾಡಿದ್ದನ್ನೇ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ, ಸದನದ ಹೊರಗೂ ಒಳಗೂ ಕಾಂಗ್ರೆಸ್ ನಾಯಕರನ್ನು ಮಾತಿನಲ್ಲೇ ಕಟ್ಟಿ ಹಾಕುವ ಯತ್ನ ಮಾಡಿದೆ.

ಸಚಿವ ಸ್ಥಾನದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಿದ್ದನ್ನು ಖಂಡಿಸಿ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ರಾಜಣ್ಣ ಬೆಂಬಲಿಗರು, ಅಭಿಮಾನಿಗಳು ಮಂಗಳವಾರ ಬೃಹತ್​​ ಪ್ರತಿಭಟನೆ ನಡೆಸಿದರು. ಮಧುಗಿರಿ ಬಂದ್​ಗೆ ಕರೆ ನೀಡಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಭಾಗಿಯಾದರು. ಈ ವೇಳೆ ರಾಜಣ್ಣ ಅಭಿಮಾನಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸುವಂತೆ ಹೈಡ್ರಾಮಾ ಮಾಡಿದ. ಕೂಡಲೇ ಸ್ಥಳದಲ್ಲಿದ್ದವರು ಆತನ ಮೇಲೆ ನೀರು ಸುರಿದು ರಕ್ಷಿಸಿದರು.

ನಾಟಿ ಹೋರಿಗಳ ಕತ್ತು ಕೊಯ್ದು ಕಟುಕರು ! ಅಕ್ರಮ ಸಾಗಣೆಯ ಅನುಮಾನ!

 

ಸಾಮೂಹಿಕ ರಾಜೀನಾಮೆಗೆ ಮುಂದಾದ ರಾಜಣ್ಣ ಬೆಂಬಲಿಗರು
ಮಧುಗಿರಿಯ ಪುರಸಭೆ ವಾರ್ಡ್​ ಸಂಖ್ಯೆ 22 ರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. 10ನೇ ವಾರ್ಡ್ ಸದಸ್ಯೆ ಗಿರಿಜಾ ಮಂಜುನಾಥ್ ಉಪ ವಿಭಾಗಾಧಿಕಾರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅತ್ತ ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ಹಾದಿ ತುಳಿದಿದ್ದರೆ, ಇತ್ತ ಬಿಜೆಪಿಗೆ ರಾಜಣ್ಣರನ್ನು ವಜಾ ಮಾಡಿದ್ದೇ ಅಸ್ತ್ರವಾಗಿ ಸಿಕ್ಕಿದೆ.

ರಾಜಣ್ಣ ವಜಾ ಮಾಡಿದ್ದೇಕೆ? ಸದನದಲ್ಲಿ ಉತ್ತರಕ್ಕೆ ಬಿಜೆಪಿ ಪಟ್ಟು
ವಿಧಾನಸಭೆ ಕಲಾಪದ ಆರಂಭದಲ್ಲಿ, ಅಂದರೆ ಪ್ರಶ್ನೋತ್ತರ ವೇಳೆ ಶುರುವಾಗುವ ಮುನ್ನ ವಿಪಕ್ಷ ನಾಯಕ ಆರ್​ ಅಶೋಕ್ ಮಾತನಾಡಿ, ರಾಜಣ್ಣರನ್ನು ವಜಾ ಮಾಡಿದ್ದೇಕೆ? ಸರ್ಕಾರ ಇದಕ್ಕೆ ಉತ್ತರ ಕೊಡಬೇಕೆಂದು ಆಗ್ರಹಿಸಿದರು. ಈ ವೇಳೆ, ಸ್ಪೀಕರ್ ಖಾದರ್ ಇದು ಅವರ ಪಕ್ಷದ ಆಂತರಿಕ ವಿಚಾರ ಎಂದಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಇಷ್ಟಕ್ಕೆ ಸುಮ್ಮನಾಗದ ಆರ್​.ಅಶೋಕ್, ಮತ ಕಳ್ಳತನದ ಕುರಿತು ರಾಜಣ್ಣ ಸತ್ಯ ಹೇಳಿದ್ದಾರೆ. ಸತ್ಯ ಹೇಳಿದ್ದಕ್ಕೆ ಅವರನ್ನು ಬಲಿ ಪಡೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಇತ್ತ ವಿಧಾನ ಪರಿಷತ್​ನಲ್ಲೂ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪತ್ರವನ್ನು ಓದಿದರು. ಇದಕ್ಕೆ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸಭಾಪತಿ ಹೊರಟ್ಟಿ, ಪ್ರಶ್ನೋತ್ತರ ಕಲಾಪದ ಬಳಿಕ ಬಳಿಕ ಪ್ರಸ್ತಾಪಿಸುವಂತೆ ಸೂಚನೆ ನೀಡಿದರು. ಆಗ ಬಿಜೆಪಿ ಸದಸ್ಯರು ಈಗಲೇ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಕೆಮ್ಮಿದ್ದಕ್ಕೆ ಕಿಚಾಯಿಸಿದ ಬಿಜೆಪಿ
ಇದೆಲ್ಲದರ ನಡುವೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿರುವಾಗ ಉತ್ತರ ನೀಡಲು ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ಕೆಮ್ಮತೊಡಗಿದರು. ಈ ವೇಳೆ, ಬಿಜೆಪಿ ಶಾಸಕ ಸುನಿಲ್ ಕುಮಾರ್, ‘ನೀವು ಕೆಮ್ಮಿದರೆ ಯಾರಿಗೆ ಅಪಾಯ ಕಾದಿದೆಯೋ ಗೊತ್ತಿಲ್ಲ’ ಎಂದು ಕಾಲೆಳೆದರು. ಸುನೀಲ್ ಕುಮಾರ್ ಮಾತಿಗೆ ಸದನ ನಗೆ ಗಡಲಲ್ಲಿ ತೇಲಿತು. ಏನೂ ಪ್ರತಿಕ್ರಿಯೆ ನೀಡದ ಡಿಕೆ ಶಿವಕುಮಾರ್ ಉತ್ತರ ಮುಂದುವರಿಸಿದರು.
ಸದನದ ಹೊರಗೂ ಮಾತನಾಡಿರುವ ಬಿಜೆಪಿ ನಾಯಕರು, ರಾಜಣ್ಣ ವಜಾ ಮಾಡುವಂಥ ಅಪರಾಧ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!