ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ ಜ.೨೨ರಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಲಾಗೈಡ್ ಮಾಸ ಪತ್ರಿಕೆಯ ಸಂಪಾದಕರಾದ ಹೆಚ್.ಎನ್.ವೆಂಕಟೇಶ್ ಅವರು ಕಾರ್ಯನಿರ್ವಹಿಸಿದ್ದು, ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾಮನಗಳಿಗೆ ಸಲ್ಲಿಸಿದ್ದ ನಾಮಪತ್ರಗಳನ್ನು ಪರಿಶೀಲಿಸಿ, ಎಲ್ಲಾ ಸ್ಥಾನಗಳಿಗೂ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದರು.

ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಪ್ರಗತಿಗೋಪಾಲಕೃಷ್ಣ, ಉಪಾಧ್ಯಕ್ಷರಾಗಿ ಕೆ.ಹೆಚ್.ಚಂದ್ರು, ಪ್ರದಾನ ಕಾರ್ಯದರ್ಶಿಯಾಗಿ ಲಕ್ಷ್ಮೀನಾರಾಯಣ್ ಯಾದವ್ ಹಾಗೂ ಖಜಾಂಚಿಯಾಗಿ ಉದಯಶಂಕರ್ ಅವರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿ, ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಅನುರಾಗ ಬಸವರಾಜು, ಗವಿಮಠ ರವಿ, ಎಸ್.ಆರ್.ಮಧುಸೂಧನ್, ನಾಗೇಶ್ ಪಾಣಪತ್ತಲೆ, ಎ.ನಂದನ್ ಉಪಸ್ಥಿತರಿದ್ದರು. ಫೋಟೋ ಕ್ಯಾಪ್ಷನ್ ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ನ ನೂತನ ಪಧಾಧಿಕಾರಿಗಳಿಗೆ ಚುನಾವಣಾಧಿಕಾರಿ ಲಾಗೈಡ್ ಮಾಸ ಪತ್ರಿಕೆಯ ಸಂಪಾಕರಾದ ಹೆಚ್.ಎನ್.ವೆಂಕಟೇಶ್ ಪ್ರಮಾಣ ಪತ್ರ ವಿತರಿಸಿದರು.

  • Related Posts

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು