ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಕೂಲಿಕೆಲಸಗಾರ…!

ಪ್ರಜ್ವಲ್ ರೇವಣ್ಣ
ಜೈಲಿನಲ್ಲಿ ಕೃಷಿ ಕೂಲಿ ಕೆಲಸ ಮಾಡುವುದಾಗಿ ಹೇಳಿದ ಪ್ರಜ್ವಲ್
ಕೃಷಿ ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸ ಮಾಡುವ ಪ್ರಜ್ವಲ್
ಅಪರಾಧಿಗಳು ಜೈಲಿನಲ್ಲಿ ಯಾವುದಾದರೂ ಕೆಲಸ ಮಾಡಲೇಬೇಕು
ರೇಪ್ ಕೇಸ್ ನಲ್ಲಿ ಅಪರಾಧಿ ಆಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ, ಕೊನೆಗೂ ಜೈಲಿನಲ್ಲಿ ಏನು ಕೆಲಸ ಮಾಡುತ್ತೇನೆ ಎಂದು ಆಯ್ಕೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿ ಆರೋಪ ಸಾಬೀತಾದ ಅಪರಾಧಿಗಳು ಯಾವುದಾದರೊಂದು ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ಜೈಲಿನಲ್ಲಿ ಈ ಕೂಲಿ ಕೆಲಸ ಮಾಡಿದ್ದಕ್ಕೆ ಕೂಲಿ ಹಣವನ್ನು ನೀಡಲಾಗುತ್ತೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನಲ್ಲಿ ಈಗ ತಾನು ಕೃಷಿ ಕೆಲಸ ಮಾಡುತ್ತೇನೆ. ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸಗಳನ್ನು ಮಾಡುತ್ತೇನೆ ಎಂದು ಜೈಲು ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಈಗ ಪ್ರಜ್ವಲ್ , ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃಷಿ ಕೂಲಿ ಕೆಲಸಗಾರ. ಜೊತೆಗೆ ಅಡ್ಮಿನಿಸ್ಟ್ರೇಟಿವ್ ಕೆಲಸಗಳ ಕೂಲಿ ಕೆಲಸಗಾರ.
ಪ್ರಜ್ವಲ್ ಗೆ ಜೈಲಿನಲ್ಲಿ ಮಾಡಿದ ಕೆಲಸಕ್ಕೆ ದಿನಕ್ಕೆ 540 ರೂಪಾಯಿ ಕೂಲಿ ಸಿಗಲಿದೆ. ಒಂದು ವರ್ಷ ಆದ ನಂತರ ದಿನಕ್ಕೆ 615 ರೂಪಾಯಿ ಕೂಲಿ ನಿಗದಿಯಾಗಲಿದೆ.
ಜೈಲಿನ ಹೊರಗೆ ಹತ್ತಾರು ಜನಕ್ಕೆ ತನ್ನ ತೋಟದಲ್ಲೇ ಪ್ರಜ್ವಲ್ ರೇವಣ್ಣ ಕೆಲಸ ಕೊಟ್ಟಿದ್ದ. ಇಡೀ ಲೋಕಸಭಾ ಕ್ಷೇತ್ರಕ್ಕೆ ಎಂಪಿಯಾಗಿದ್ದ. ಪ್ರಜ್ವಲ್ ಗೆ ಜೈಲು ಹೊರಗೆ ಎಲ್ಲದ್ದಕ್ಕೂ ಅಳುಗಳು ಇದ್ದರು. ಆದರೇ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣನೇ ಕೂಲಿ ಕೆಲಸ ಮಾಡಿ, ನಿತ್ಯದ ಕೂಲಿಯಾಗಿ 540 ರೂಪಾಯಿ ಹಣವನ್ನು ಪಡೆಯಬೇಕಾದ ಸ್ಥಿತಿ ಬಂದಿದೆ.

ಜೈಲು ಕಾಯ್ದೆ ಪ್ರಕಾರ ಜೈಲು ಅಧಿಕಾರಿಗಳು ನೀಡುವ ಕೆಲಸವನ್ನು ಸಜಾ ಬಂಧಿಗಳು ಮಾಡಬೇಕು ಅಥವಾ ವ್ಯಾಸಂಗಕ್ಕೆ ಅನುಗುಣವಾಗಿ ಕೆಲಸ ಮಾಡ್ತೀನಿ ಅಂತ ಜೈಲು ಅಧಿಕಾರಿಗಳಿಗೆ ತಿಳಿಸಬೇಕು. ಈಗ ಪ್ರಜ್ವಲ್ ರೇವಣ್ಣ ತಾನು ಕೃಷಿ ಕೆಲಸ ಹಾಗೂ ಅಡ್ಮಿನಿಸ್ಟ್ರೇಟಿವ್ ಕೆಲಸ ಮಾಡುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

 

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಬೆಂಗಳೂರು/ದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಮಂಗಳವಾರ (ಮೇ 26) ನಡೆದ ಎಐಸಿಸಿ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗೌರವಯುತವಾಗಿ ನಿರ್ಗಮಿಸಲು 15…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!