ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಕೂಲಿಕೆಲಸಗಾರ…!

ಪ್ರಜ್ವಲ್ ರೇವಣ್ಣ
ಜೈಲಿನಲ್ಲಿ ಕೃಷಿ ಕೂಲಿ ಕೆಲಸ ಮಾಡುವುದಾಗಿ ಹೇಳಿದ ಪ್ರಜ್ವಲ್
ಕೃಷಿ ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸ ಮಾಡುವ ಪ್ರಜ್ವಲ್
ಅಪರಾಧಿಗಳು ಜೈಲಿನಲ್ಲಿ ಯಾವುದಾದರೂ ಕೆಲಸ ಮಾಡಲೇಬೇಕು
ರೇಪ್ ಕೇಸ್ ನಲ್ಲಿ ಅಪರಾಧಿ ಆಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ, ಕೊನೆಗೂ ಜೈಲಿನಲ್ಲಿ ಏನು ಕೆಲಸ ಮಾಡುತ್ತೇನೆ ಎಂದು ಆಯ್ಕೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿ ಆರೋಪ ಸಾಬೀತಾದ ಅಪರಾಧಿಗಳು ಯಾವುದಾದರೊಂದು ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ಜೈಲಿನಲ್ಲಿ ಈ ಕೂಲಿ ಕೆಲಸ ಮಾಡಿದ್ದಕ್ಕೆ ಕೂಲಿ ಹಣವನ್ನು ನೀಡಲಾಗುತ್ತೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನಲ್ಲಿ ಈಗ ತಾನು ಕೃಷಿ ಕೆಲಸ ಮಾಡುತ್ತೇನೆ. ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸಗಳನ್ನು ಮಾಡುತ್ತೇನೆ ಎಂದು ಜೈಲು ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಈಗ ಪ್ರಜ್ವಲ್ , ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃಷಿ ಕೂಲಿ ಕೆಲಸಗಾರ. ಜೊತೆಗೆ ಅಡ್ಮಿನಿಸ್ಟ್ರೇಟಿವ್ ಕೆಲಸಗಳ ಕೂಲಿ ಕೆಲಸಗಾರ.
ಪ್ರಜ್ವಲ್ ಗೆ ಜೈಲಿನಲ್ಲಿ ಮಾಡಿದ ಕೆಲಸಕ್ಕೆ ದಿನಕ್ಕೆ 540 ರೂಪಾಯಿ ಕೂಲಿ ಸಿಗಲಿದೆ. ಒಂದು ವರ್ಷ ಆದ ನಂತರ ದಿನಕ್ಕೆ 615 ರೂಪಾಯಿ ಕೂಲಿ ನಿಗದಿಯಾಗಲಿದೆ.
ಜೈಲಿನ ಹೊರಗೆ ಹತ್ತಾರು ಜನಕ್ಕೆ ತನ್ನ ತೋಟದಲ್ಲೇ ಪ್ರಜ್ವಲ್ ರೇವಣ್ಣ ಕೆಲಸ ಕೊಟ್ಟಿದ್ದ. ಇಡೀ ಲೋಕಸಭಾ ಕ್ಷೇತ್ರಕ್ಕೆ ಎಂಪಿಯಾಗಿದ್ದ. ಪ್ರಜ್ವಲ್ ಗೆ ಜೈಲು ಹೊರಗೆ ಎಲ್ಲದ್ದಕ್ಕೂ ಅಳುಗಳು ಇದ್ದರು. ಆದರೇ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣನೇ ಕೂಲಿ ಕೆಲಸ ಮಾಡಿ, ನಿತ್ಯದ ಕೂಲಿಯಾಗಿ 540 ರೂಪಾಯಿ ಹಣವನ್ನು ಪಡೆಯಬೇಕಾದ ಸ್ಥಿತಿ ಬಂದಿದೆ.

ಜೈಲು ಕಾಯ್ದೆ ಪ್ರಕಾರ ಜೈಲು ಅಧಿಕಾರಿಗಳು ನೀಡುವ ಕೆಲಸವನ್ನು ಸಜಾ ಬಂಧಿಗಳು ಮಾಡಬೇಕು ಅಥವಾ ವ್ಯಾಸಂಗಕ್ಕೆ ಅನುಗುಣವಾಗಿ ಕೆಲಸ ಮಾಡ್ತೀನಿ ಅಂತ ಜೈಲು ಅಧಿಕಾರಿಗಳಿಗೆ ತಿಳಿಸಬೇಕು. ಈಗ ಪ್ರಜ್ವಲ್ ರೇವಣ್ಣ ತಾನು ಕೃಷಿ ಕೆಲಸ ಹಾಗೂ ಅಡ್ಮಿನಿಸ್ಟ್ರೇಟಿವ್ ಕೆಲಸ ಮಾಡುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

 

Related Posts

SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ?

ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ…

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!