ಪ್ರಣಿತಾ ಸುಭಾಷ್ ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ; ಕಾರಣವೇನು?

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ದಂಪತಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗಂಡು ಮಗು ಜನಿಸಿದೆ. ಈ ಮಗುವಿಗೆ ಈಗ ನಾಮಕರಣ ಶಾಸ್ತ್ರ ನಡೆದಿದೆ. ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡುತ್ತಿದ್ದರೆ ಪ್ರಣಿತಾ ಮಾತ್ರ ಮಹಾಭಾರತದಲ್ಲಿ ಬರೋ ಈ ಪ್ರಮುಖ ವ್ಯಕ್ತಿಯ ಹೆಸರು ಇಟ್ಟಿದ್ದಾರೆ.

ಹೌದು, ತಮ್ಮ ಮಗುವಿಗೆ ಪ್ರಣಿತಾ ಅವರು ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಇಡೀ ಮಹಾಭಾರತದ ಸಾರಥಿ ಎನಿಸಿಕೊಂಡಿದ್ದಾರೆ ಕೃಷ್ಣ. ಇದೇ ಹೆಸರನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾರಣ ವಿವರಿಸಿದ್ದಾರೆ.


ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ತಮ್ಮ ಮಕ್ಕಳಿಗೆ ಫ್ಯಾನ್ಸಿ ಹೆಸರನ್ನು ಇಡಲು ಬಯಸುತ್ತಾರೆ. ಅದರಲ್ಲೂ ಪೌರಾಣಿಕ ಪಾತ್ರಗಳ ಹೆಸರನ್ನು ಇಡಬೇಕು ಎಂದು ಯಾರೂ ಬಯಸುವುದಿಲ್ಲ. ಆದರೆ, ಪ್ರಣಿತಾ ಅವರು ಈ ವಿಚಾರದಲ್ಲಿ ಭಿನ್ನ. ತಮ್ಮ ಮಗನಿಗೆ ಅವರು ಜೈ ಕೃಷ್ಣ ಎಂದು ನಾಮಕರಣ ಮಾಡಿದ್ದಾರೆ. ಅವರು ಸಾಂಪ್ರದಾಯಿಕ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಎಲ್ಲರಿಂದ ಮೆಚ್ಚುಗೆ ಪಡೆದಿದ್ದಾರೆ.


‘ನನ್ನ ತಂದೆಯ ತಂದೆ ಹೆಸರು ಬಾಲಕೃಷ್ಣ ಅಂತ. ನಮ್ಮ ಹಾಸ್ಪಿಟಲ್ ಹೆಸರು ಶ್ರೀಕೃಷ್ಣ. ನನ್ನ ಪತಿಯ ತಂದೆಯ ಹೆಸರು ವಾಸುದೇವ ಅಂತ. ಎಲ್ಲಾ ಒಟ್ಟಿಗೆ ಸೇರಿ ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದೇವೆ’ ಎಂದಿದ್ದಾರೆ ಪ್ರಣಿತಾ ಪ್ರಣಿತಾ ಹಾಗೂ ಉದ್ಯಮಿ ನಿತಿನ್ ಜೋಡಿ ಕೊವಿಡ್ ಸಂದರ್ಭದಲ್ಲಿ ಮದುವೆ ಆಗಿತ್ತು.

ಈ ದಂಪತಿಗೆ 2022ರಲ್ಲಿ ಹೆಣ್ಣು ಮಗು ಜನಿಸಿತು. ಅವಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಸೆಪ್ಟೆಂಬರ್ನಲ್ಲಿ ಪ್ರಣಿತಾ ಗಂಡು ಮಗುವನ್ನು ಬರಮಾಡಿಕೊಂಡಿದ್ದು, ಈಗ ನಾಮಕರಣ ಶಾಸ್ತ್ರ ನಡೆದಿದೆ. ಪ್ರಣಿತಾ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರವೇ ಇದ್ದಾರೆ. ಸದ್ಯ ಅವರು ಎರಡನೇ ಮಗುವಿನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಆ ಬಳಿಕ ಅವರು ಹೊಸ ಸಿನಿಮಾ ಘೋಷಣೆ ಮಾಡೋ ಸಾಧ್ಯತೆ ಇದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!