ಪ್ರಣಿತಾ ಸುಭಾಷ್ ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ; ಕಾರಣವೇನು?

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ದಂಪತಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗಂಡು ಮಗು ಜನಿಸಿದೆ. ಈ ಮಗುವಿಗೆ ಈಗ ನಾಮಕರಣ ಶಾಸ್ತ್ರ ನಡೆದಿದೆ. ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡುತ್ತಿದ್ದರೆ ಪ್ರಣಿತಾ ಮಾತ್ರ ಮಹಾಭಾರತದಲ್ಲಿ ಬರೋ ಈ ಪ್ರಮುಖ ವ್ಯಕ್ತಿಯ ಹೆಸರು ಇಟ್ಟಿದ್ದಾರೆ.

ಹೌದು, ತಮ್ಮ ಮಗುವಿಗೆ ಪ್ರಣಿತಾ ಅವರು ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಇಡೀ ಮಹಾಭಾರತದ ಸಾರಥಿ ಎನಿಸಿಕೊಂಡಿದ್ದಾರೆ ಕೃಷ್ಣ. ಇದೇ ಹೆಸರನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾರಣ ವಿವರಿಸಿದ್ದಾರೆ.


ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ತಮ್ಮ ಮಕ್ಕಳಿಗೆ ಫ್ಯಾನ್ಸಿ ಹೆಸರನ್ನು ಇಡಲು ಬಯಸುತ್ತಾರೆ. ಅದರಲ್ಲೂ ಪೌರಾಣಿಕ ಪಾತ್ರಗಳ ಹೆಸರನ್ನು ಇಡಬೇಕು ಎಂದು ಯಾರೂ ಬಯಸುವುದಿಲ್ಲ. ಆದರೆ, ಪ್ರಣಿತಾ ಅವರು ಈ ವಿಚಾರದಲ್ಲಿ ಭಿನ್ನ. ತಮ್ಮ ಮಗನಿಗೆ ಅವರು ಜೈ ಕೃಷ್ಣ ಎಂದು ನಾಮಕರಣ ಮಾಡಿದ್ದಾರೆ. ಅವರು ಸಾಂಪ್ರದಾಯಿಕ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಎಲ್ಲರಿಂದ ಮೆಚ್ಚುಗೆ ಪಡೆದಿದ್ದಾರೆ.


‘ನನ್ನ ತಂದೆಯ ತಂದೆ ಹೆಸರು ಬಾಲಕೃಷ್ಣ ಅಂತ. ನಮ್ಮ ಹಾಸ್ಪಿಟಲ್ ಹೆಸರು ಶ್ರೀಕೃಷ್ಣ. ನನ್ನ ಪತಿಯ ತಂದೆಯ ಹೆಸರು ವಾಸುದೇವ ಅಂತ. ಎಲ್ಲಾ ಒಟ್ಟಿಗೆ ಸೇರಿ ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದೇವೆ’ ಎಂದಿದ್ದಾರೆ ಪ್ರಣಿತಾ ಪ್ರಣಿತಾ ಹಾಗೂ ಉದ್ಯಮಿ ನಿತಿನ್ ಜೋಡಿ ಕೊವಿಡ್ ಸಂದರ್ಭದಲ್ಲಿ ಮದುವೆ ಆಗಿತ್ತು.

ಈ ದಂಪತಿಗೆ 2022ರಲ್ಲಿ ಹೆಣ್ಣು ಮಗು ಜನಿಸಿತು. ಅವಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಸೆಪ್ಟೆಂಬರ್ನಲ್ಲಿ ಪ್ರಣಿತಾ ಗಂಡು ಮಗುವನ್ನು ಬರಮಾಡಿಕೊಂಡಿದ್ದು, ಈಗ ನಾಮಕರಣ ಶಾಸ್ತ್ರ ನಡೆದಿದೆ. ಪ್ರಣಿತಾ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರವೇ ಇದ್ದಾರೆ. ಸದ್ಯ ಅವರು ಎರಡನೇ ಮಗುವಿನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಆ ಬಳಿಕ ಅವರು ಹೊಸ ಸಿನಿಮಾ ಘೋಷಣೆ ಮಾಡೋ ಸಾಧ್ಯತೆ ಇದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!