ಪ್ರಣಿತಾ ಸುಭಾಷ್ ಮಗನಿಗೆ ಪೌರಾಣಿಕ ಪಾತ್ರದ ಹೆಸರಿಟ್ಟ; ಕಾರಣವೇನು?

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ದಂಪತಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಗಂಡು ಮಗು ಜನಿಸಿದೆ. ಈ ಮಗುವಿಗೆ ಈಗ ನಾಮಕರಣ ಶಾಸ್ತ್ರ ನಡೆದಿದೆ. ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡುತ್ತಿದ್ದರೆ ಪ್ರಣಿತಾ ಮಾತ್ರ ಮಹಾಭಾರತದಲ್ಲಿ ಬರೋ ಈ ಪ್ರಮುಖ ವ್ಯಕ್ತಿಯ ಹೆಸರು ಇಟ್ಟಿದ್ದಾರೆ.

ಹೌದು, ತಮ್ಮ ಮಗುವಿಗೆ ಪ್ರಣಿತಾ ಅವರು ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಇಡೀ ಮಹಾಭಾರತದ ಸಾರಥಿ ಎನಿಸಿಕೊಂಡಿದ್ದಾರೆ ಕೃಷ್ಣ. ಇದೇ ಹೆಸರನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾರಣ ವಿವರಿಸಿದ್ದಾರೆ.


ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ತಮ್ಮ ಮಕ್ಕಳಿಗೆ ಫ್ಯಾನ್ಸಿ ಹೆಸರನ್ನು ಇಡಲು ಬಯಸುತ್ತಾರೆ. ಅದರಲ್ಲೂ ಪೌರಾಣಿಕ ಪಾತ್ರಗಳ ಹೆಸರನ್ನು ಇಡಬೇಕು ಎಂದು ಯಾರೂ ಬಯಸುವುದಿಲ್ಲ. ಆದರೆ, ಪ್ರಣಿತಾ ಅವರು ಈ ವಿಚಾರದಲ್ಲಿ ಭಿನ್ನ. ತಮ್ಮ ಮಗನಿಗೆ ಅವರು ಜೈ ಕೃಷ್ಣ ಎಂದು ನಾಮಕರಣ ಮಾಡಿದ್ದಾರೆ. ಅವರು ಸಾಂಪ್ರದಾಯಿಕ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಎಲ್ಲರಿಂದ ಮೆಚ್ಚುಗೆ ಪಡೆದಿದ್ದಾರೆ.


‘ನನ್ನ ತಂದೆಯ ತಂದೆ ಹೆಸರು ಬಾಲಕೃಷ್ಣ ಅಂತ. ನಮ್ಮ ಹಾಸ್ಪಿಟಲ್ ಹೆಸರು ಶ್ರೀಕೃಷ್ಣ. ನನ್ನ ಪತಿಯ ತಂದೆಯ ಹೆಸರು ವಾಸುದೇವ ಅಂತ. ಎಲ್ಲಾ ಒಟ್ಟಿಗೆ ಸೇರಿ ಜೈ ಕೃಷ್ಣ ಎಂದು ಹೆಸರು ಇಟ್ಟಿದ್ದೇವೆ’ ಎಂದಿದ್ದಾರೆ ಪ್ರಣಿತಾ ಪ್ರಣಿತಾ ಹಾಗೂ ಉದ್ಯಮಿ ನಿತಿನ್ ಜೋಡಿ ಕೊವಿಡ್ ಸಂದರ್ಭದಲ್ಲಿ ಮದುವೆ ಆಗಿತ್ತು.

ಈ ದಂಪತಿಗೆ 2022ರಲ್ಲಿ ಹೆಣ್ಣು ಮಗು ಜನಿಸಿತು. ಅವಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಸೆಪ್ಟೆಂಬರ್ನಲ್ಲಿ ಪ್ರಣಿತಾ ಗಂಡು ಮಗುವನ್ನು ಬರಮಾಡಿಕೊಂಡಿದ್ದು, ಈಗ ನಾಮಕರಣ ಶಾಸ್ತ್ರ ನಡೆದಿದೆ. ಪ್ರಣಿತಾ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ದೂರವೇ ಇದ್ದಾರೆ. ಸದ್ಯ ಅವರು ಎರಡನೇ ಮಗುವಿನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಆ ಬಳಿಕ ಅವರು ಹೊಸ ಸಿನಿಮಾ ಘೋಷಣೆ ಮಾಡೋ ಸಾಧ್ಯತೆ ಇದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!