ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್.

ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದು ತಿಳಿಸಿದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದು ತಿಳಿಸಿದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದು ತಿಳಿಸಿದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದು ತಿಳಿಸಿದರು.
ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ